ADVERTISEMENT

ರೈತರ ಸಾಲಮನ್ನಾ ಮಾಡಿಸದ ಬಿಜೆಪಿ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2017, 8:52 IST
Last Updated 27 ಅಕ್ಟೋಬರ್ 2017, 8:52 IST
ವರುಣಾ ಕ್ಷೇತ್ರದ ಭುಗತಗಳ್ಳಿಯಲ್ಲಿ ಗುರುವಾರ ನಡೆದ ವಿವಿಧ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ಉದ್ಘಾಟನೆ ನೆರವೇರಿಸಿ ಸಂಸದ ಆರ್.ಧ್ರುವನಾರಾಯಣ ಮಾತನಾಡಿದರು
ವರುಣಾ ಕ್ಷೇತ್ರದ ಭುಗತಗಳ್ಳಿಯಲ್ಲಿ ಗುರುವಾರ ನಡೆದ ವಿವಿಧ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ಉದ್ಘಾಟನೆ ನೆರವೇರಿಸಿ ಸಂಸದ ಆರ್.ಧ್ರುವನಾರಾಯಣ ಮಾತನಾಡಿದರು   

ಮೈಸೂರು: ಕೇಂದ್ರ ಸರ್ಕಾರದಿಂದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡಿಸಲಾಗದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ರೈತರ ಸಮಾವೇಶವನ್ನು ಯಾವ ಪುರಷಾರ್ಥಕ್ಕೆ ಮಾಡುತ್ತಿದ್ದಾರೆ ಎಂದು ಸಂಸದ ಆರ್. ಧ್ರುವನಾರಾಯಣ ವ್ಯಂಗ್ಯವಾಡಿದರು.

ವರುಣಾ ಕ್ಷೇತ್ರದ ಭುಗತಗಳ್ಳಿಯಲ್ಲಿ ಗುರುವಾರ ನಡೆದ ವಿವಿಧ ಗ್ರಾಮಗಳ ₹ 11 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ‘ಬಿಜೆಪಿ ಅಧಿಕಾರದಲ್ಲಿದ್ದಾಗ ರೈತರ ಮೇಲೆ ಗೋಲಿಬಾರ್ ನಡೆಯಿತು’ ಎಂದರು.
ಕೇಂದ್ರ ಸರ್ಕಾರದಿಂದ ರೈತರ ಸಾಲ ಮನ್ನಾ ಮಾಡಿಸಲಾಗದವರು ಕೇವಲ ರೈತರ ಸಮಾವೇಶ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ADVERTISEMENT

ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ, ಜಿ.ಪಂ. ಸದಸ್ಯೆ ಪ್ರೇಮಾ ಮಹದೇವಯ್ಯ, ತಾ.ಪಂ. ಸದಸ್ಯ ಮುದ್ದುರಾಮೇಗೌಡ, ಮುಖಂಡರಾದ
ಭುಗತಗಳ್ಳಿ ಮಣಿ, ರಾಯನಹುಂಡಿ ರವಿ, ಬೆಲವತ್ತ ಶಿವಕುಮಾರ್, ಚಂದ್ರಶೇಖರ್, ಸಿದ್ದಯ್ಯ, ಚಿಕ್ಕದೇವಯ್ಯ, ವಾಜಮಂಗಲ ರವಿ, ಪಟ್ಟೆಹುಂಡಿ ಕಲ್ಪನಾ, ಹೆಳವರಹುಂಡಿ ಸೋಮು, ನಿವೃತ್ತ ಪ್ರಾಂಶುಪಾಲ ಸಿದ್ದಯ್ಯ, ಗ್ರಾಮದ ಪಿಡಿಒ ವಿಶ್ವನಾಥ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.