ಮೈಸೂರು: ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಯ (ಐಟಿಐ) ವಿಶ್ವೇಶ್ವರನಗರ ಶಾಖೆಯನ್ನು ಸ್ಥಳಾಂತರಿಸುವುದನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿ ಐಟಿಐ ವಿದ್ಯಾರ್ಥಿಗಳು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಸಂಸ್ಥೆಯ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.
ಈ ಸಂಸ್ಥೆಗೆ ಬರುವುದಕ್ಕೆ ಎಲ್ಲ ರೀತಿಯ ಅನುಕೂಲಗಳಿವೆ. ಹಲವಾರು ವಿದ್ಯಾರ್ಥಿಗಳು ದೂರದ ಊರುಗಳಿಂದ ಬರುತ್ತಿದ್ದು, ಇಲ್ಲಿಗೆ ಬಸ್ ಸೌಲಭ್ಯ ಸೇರಿದಂತೆ ಇತರ ಸೌಲಭ್ಯಗಳಿವೆ. ಹೀಗಿರುವಾಗಿ ಈ ಶಾಖೆಯನ್ನು ಸ್ಥಳಾಂತರಿಸಿದರೆ ಹಲವರಿಗೆ ತುಂಬಾ ತೊಂದರೆಯಾಗಲಿದೆ. ಆದ್ದರಿಂದ ಈ ಶಾಖೆಯನ್ನು ಸ್ಥಳಾಂತರಿಸುವುದು ಬೇಡ ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.