ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರು ಭೇಟಿ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದ್ದು, ಮಾರ್ಚ್ 6ರಂದು ನಡೆಯಲಿರುವ ಕಾರ್ಯಕ್ರಮಗಳನ್ನು 10ಕ್ಕೆ ಮುಂದೂಡಲಾಗಿದೆ.
ಸೋಮವಾರ (ಮಾರ್ಚ್ 5) ಮತ್ತು ಮಂಗಳವಾರ (ಮಾರ್ಚ್ 6) ಮುಖ್ಯಮಂತ್ರಿ ಅವರ ಮೈಸೂರು ಭೇಟಿ ನಿಗದಿಯಾಗಿತ್ತು. ಎರಡು ದಿನಗಳ ಭೇಟಿಯನ್ನು ಒಂದು ದಿನಕ್ಕೆ ಮೊಟಕುಗೊಳಿಸಲಾಗಿದೆ. ಸೋಮವಾರ ಮಧ್ಯಾಹ್ನ 2 ಗಂಟೆಗೆ ಮೈಸೂರು ತಾಲ್ಲೂಕಿನ ಜಯಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.