ADVERTISEMENT

ಹಣ ಹಂಚಿಕೆ ಆರೋಪ; ಪುರಸಭೆ ಮಾಜಿ ಸದಸ್ಯ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2018, 10:24 IST
Last Updated 12 ಏಪ್ರಿಲ್ 2018, 10:24 IST

ಕೆ.ಆರ್.ನಗರ: ಇಲ್ಲಿನ ಸಿ.ಎಂ ರಸ್ತೆಯ 8ನೇ ವಾರ್ಡ್ ಮನೆಯೊಂದರಲ್ಲಿ ಮಹಿಳೆಯರಿಗೆ ಹಣ ಹಂಚಿದ ಆರೋಪದ ಮೇರೆಗೆ ಪುರಸಭೆ ನಾಮನಿರ್ದೇಶಿತ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ವಿನಯ್ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗುವುದು ಎಂದು ಪ್ಲೈಯಿಂಗ್ ಸ್ಕಾಡ್ ಅಧಿಕಾರಿ ಶ್ರೀನಿವಾಸ್ ಹೇಳಿದರು.

ಮಹಿಳೆಯರಿಗೆ ಹಣ ಹಂಚಲಾಗುತ್ತದೆ ಎಂದು ಬುಧವಾರ ಸಂಜೆ ಮಾಹಿತಿ ಸಿಕ್ಕಿತು. ಸ್ಥಳಕ್ಕೆ ಹೋಗುವಷ್ಟರಲ್ಲಿ ಅಲ್ಲಿ ಯಾರೂ ಹಣ ಹಂಚುತ್ತಿರಲಿಲ್ಲ. ಆದರೆ, ಹಣ ಹಂಚುತ್ತಿರುವ ಬಗ್ಗೆ ಇಂದ್ರಜಿತ್ ಗೌಡ ಎಂಬಾತ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದ ವಿಡಿಯೊ ಕ್ಲಿಪ್ಪಿಂಗ್ ತೋರಿಸಿದ. ಅದಲ್ಲಿರುವ ವ್ಯಕ್ತಿ ವಿನಯ್ ಎಂದು ಗುರುತಿಸಿ ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆತರಲಾಗಿದೆ. ಚುನಾವಣಾ ಅಧಿಕಾರಿಗಳ ಸೂಚನೆಯಂತೆ ವಿನಯ್ ವಿರುದ್ಧ ದೂರು ದಾಖಲಿಸಲಾಗುತ್ತದೆ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ. ಹಣ ಹಂಚುತ್ತಿರುವ ವಿಡಿಯೊ ವೈರಲ್ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT