ADVERTISEMENT

ಹೊಟೇಲ್ ಮಾಲೀಕರ ಸಂಘದ ಸಮ್ಮೇಳನ ನಾಳೆಯಿಂದ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2010, 13:00 IST
Last Updated 17 ಡಿಸೆಂಬರ್ 2010, 13:00 IST

ಮೈಸೂರು:  ಕರ್ನಾಟಕ ಪ್ರದೇಶ ಹೊಟೇಲ್ ಮತ್ತು ಉಪಾಹಾರ ಮಂದಿರಗಳ ಸಂಘದ 16ನೇ ರಾಜ್ಯ ಮಟ್ಟದ ಸಮ್ಮೇಳನವನ್ನು  ನಗರದ ರಾಜೇಂದ್ರ ಕಲಾಮಂದಿರದಲ್ಲಿ ಡಿ.18 ಮತ್ತು 19 ರಂದು ಆಯೋಜಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮ್ಮೇಳನವನ್ನು 18 ರಂದು ಬೆಳಿಗ್ಗೆ 10.30 ಗಂಟೆಗೆ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ, ಗೃಹ ಸಚಿವ ಆರ್.ಅಶೋಕ, ಇಂಧನ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್ ಭಾಗವಹಿಸಲಿದ್ದಾರೆ. ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಡಿ.19ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT