ಮೈಸೂರು: ದೇವನೂರು ಎರಡನೇ ಹಂತ ಬಡಾವಣೆಯಲ್ಲಿ ಅತಿಕ್ರಮಣಗೊಂಡಿದ್ದ ಮುಡಾ ಆಸ್ತಿಯನ್ನು ಮಂಗಳವಾರ ತೆರವುಗೊಳಿಸಲಾಗಿದೆ.
ಸೈಯದ್ ಹಸೀಬ್ ಎಂಬುವರು ಅತಿಕ್ರಮಣ ಮಾಡಿಕೊಂಡಿದ್ದರು. ಮಂಗಳವಾರ ಉದಯಗಿರಿ ಪೊಲೀಸರೊಂದಿಗೆ ಸ್ಥಳಕ್ಕೆ ತೆರಳಿದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ಸಿಬ್ಬಂದಿ ಸ್ವತ್ತುಗಳನ್ನು ತಮ್ಮ ವಶಕ್ಕೆ ಪಡೆದು ಪ್ರಾಧಿಕಾರದ ಆಸ್ತಿ ಎಂದು ನಾಮಫಲಕ ಅಳವಡಿಸಿದರು.
ಗ್ರಾಮದ ಸರ್ವೆ ನಂಬರ್ 166/1, 166/2, 164ರಲ್ಲಿ ರಚಿಸಲಾಗಿದ್ದ ಒಟ್ಟು 14 ನಿವೇಶನಗಳನ್ನು ಪ್ರಾಧಿಕಾರವು ಸಂರಕ್ಷಿಸುವ ನಿಟ್ಟಿನಲ್ಲಿ ಕ್ರಮ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಅಂದಾಜು ಮೌಲ್ಯ ₹ 10 ಕೋಟಿಗಳಾಗಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.