ಸುತ್ತೂರು (ಮೈಸೂರು ಜಿಲ್ಲೆ): ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಸೋಮವಾರ ಒಂದು ಅಂತರ್ ಧರ್ಮೀಯ, 23 ಅಂತರ್ಜಾತಿ, ಒಂದು ಮರು ಮದುವೆ ಸೇರಿ 155 ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಹರಗುರು ಚರಮೂರ್ತಿಗಳು, ಪೋಷಕರು, ಬಂಧುಗಳು, ಮಿತ್ರರು ಹಾಗೂ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತರ ಸಮ್ಮುಖದಲ್ಲಿ ಸತಿ–ಪತಿಗಳಾದರು.
3 ವೀರಶೈವ ಲಿಂಗಾಯತ, 84 ಪರಿಶಿಷ್ಟ ಜಾತಿ, 22 ಪರಿಶಿಷ್ಟ ಪಂಗಡ, 22 ಹಿಂದುಳಿದ ವರ್ಗ, 23 ಅಂತರ್ಜಾತಿ, 3 ಅಂಗವಿಕಲ, 17 ತಮಿಳುನಾಡಿನ ಜೋಡಿಗಳು ಬೆಳಿಗ್ಗೆ 11.54ಕ್ಕೆ ವಿವಾಹವಾದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.