ಮೈಸೂರು: ಕೆಪಿಸಿಸಿಗೆ ನಾಲ್ಕು ಕಾರ್ಯಾಧ್ಯಕ್ಷ ಸ್ಥಾನದ ಸೃಷ್ಟಿ ಬಗ್ಗೆ ಚಿಂತನೆ ನಡೆದಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಭಾನುವಾರ ಹೇಳಿದರು.
ಜಾತಿ ಮತ್ತು ಪ್ರದೇಶವಾರು ಸಮತೋಲನ ಮಾಡಲು ಈ ಚಿಂತನೆ ನಡೆದಿದೆ. ಇನ್ನೊಂದು ವಾರದಲ್ಲಿ ಇದು ಬಹಿರಂಗವಾಗಲಿದೆ. ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಳಂಬವಾಗಿದೆಯಷ್ಟೇ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ಕಾಂಗ್ರೆಸ್ನಲ್ಲಿ ಮೂಲ, ವಲಸಿಗ ಎಂಬ ಪ್ರಶ್ನೆಯೇ ಇಲ್ಲ. ನಾನು ಪಕ್ಷ ಸೇರಿ 10 ವರ್ಷವಾಗಿದೆ ಎಂದರು.
ಬೇಗ ಸಚಿವರಾಗಲಿ: ರಮೇಶ್ ಜಾರಕಿಹೊಳಿ ಸೇರಿದಂತೆ ಅನೇಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಅವರ ಆಸೆ ಬೇಗ ಈಡೇರಲಿ ಎಂದು ಸತೀಶ್ ಕುಟುಕಿದರು.
ಸಚಿವರಾಗಬೇಕು ಎಂಬ ಆಸೆಗೆ ಕುಮಾರಸ್ವಾಮಿ ಸರ್ಕಾರವನ್ನು ಬೀಳಿಸಿ ಶತ ಪ್ರಯತ್ನ ಮಾಡಿದ್ದಾರೆ. ಯಡಿಯೂರಪ್ಪ ಅವರೆಲ್ಲರ ಆಸೆಯನ್ನು ಪೂರೈಸಲಿ ಎನ್ನುವುದೇ ನನ್ನ ಆಶಯ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.