ADVERTISEMENT

ಪಟಾಕಿ ಅವಘಡ: ಮತ್ತೊಬ್ಬ ಸಾವು

​ಪ್ರಜಾವಾಣಿ ವಾರ್ತೆ
Published 31 ಜನವರಿ 2018, 7:31 IST
Last Updated 31 ಜನವರಿ 2018, 7:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹಂಪಾಪುರ (ಮೈಸೂರು): ಪಟಾಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಲ್ಲನಾಯಕ್ (60) ಎಂಬುವರು ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಇದರಿಂದ ಸಾವಿನ ಸಂಖ್ಯೆ ಎರಡಕ್ಕೆ ಏರಿದೆ. ಇನ್ನೂ ಐದು ಗಾಯಾಳುಗಳು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಟಾಕಿ ತಯಾರಕ ಹರೀಶ್ ಜ.29ರಂದು ಮೃತಪಟ್ಟಿದ್ದರು.

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರದಲ್ಲಿ ಜ.26ರಂದು ಸಂಭವಿಸಿದ ಅವಘಡದಲ್ಲಿ 7 ಮಂದಿ ಗಾಯಗೊಂಡಿದ್ದರು. ಗ್ರಾಮದ ಜಾತ್ರೆಗೆ ಪಟಾಕಿ ತಯಾರಿಸುತ್ತಿದ್ದ ವೇಳೆ ಸ್ಫೋಟ ಉಂಟಾಗಿತ್ತು. ಸ್ಪೋಟದ ತೀವ್ರತೆಗೆ ಕಟ್ಟಡ ನೆಲಸಮವಾಗಿತ್ತು.

 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.