ADVERTISEMENT

‘ಮೂಲ ಆದಿವಾಸಿಗಳಿಗೆ ಟಿಕೆಟ್‌ ನೀಡಿ’

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2018, 6:36 IST
Last Updated 19 ಫೆಬ್ರುವರಿ 2018, 6:36 IST

ಮೈಸೂರು: ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿ ಮುಂದಿನ ಚುನಾವಣೆಯಲ್ಲಿ ಮೂಲ ಆದಿವಾಸಿಗಳಿಗೆ ಕಾಂಗ್ರೆಸ್‌ ಟಿಕೆಟ್ ನೀಡಬೇಕು ಎಂದು ಅಖಿಲ ಕರ್ನಾಟಕ ಮೇದ ಜನಾಂಗದ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಎಂ.ಅಂಜನಮೂರ್ತಿ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ಒಳ ಮೀಸಲಾತಿಗೆ ಹಸಿರು ನಿಶಾನೆ ತೋರಿದ್ದು, ಆಡಳಿತರೂಢ ಸರ್ಕಾರ ಒಳ ಮೀಸಲಾತಿ ಜಾರಿಗೆ ಆದ್ಯತೆ ನೀಡಿ, ಮೂಲ ಆದಿವಾಸಿಗಳಲ್ಲಿ ಒಂದಾದ ಮೇದ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT