ADVERTISEMENT

ತನಿಖಾ ಸಂಸ್ಥೆ ದುರ್ಬಳಕೆ: ಡಾ.ಎಚ್‍.ಸಿ. ಮಹದೇವಪ್ಪ ಆರೋಪ

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 4:18 IST
Last Updated 25 ಜೂನ್ 2022, 4:18 IST
ತಿ.ನರಸೀಪುರ ಪಟ್ಟಣದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷದ ನೂತನ ಕಚೇರಿ ಉದ್ಘಾಟಿಸಿದ ಮುಖಂಡ ಡಾ.ಎಚ್‍.ಸಿ. ಮಹದೇವಪ್ಪ ಮಾತನಾಡಿದರು
ತಿ.ನರಸೀಪುರ ಪಟ್ಟಣದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷದ ನೂತನ ಕಚೇರಿ ಉದ್ಘಾಟಿಸಿದ ಮುಖಂಡ ಡಾ.ಎಚ್‍.ಸಿ. ಮಹದೇವಪ್ಪ ಮಾತನಾಡಿದರು   

ತಿ.ನರಸೀಪುರ: ‘ಕೇಂದ್ರದ ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು, ತಮ್ಮ ಎದುರಾಳಿಗಳನ್ನು ಬಗ್ಗು ಬಡಿಯುವ ಹುನ್ನಾರ ನಡೆಸುತ್ತಿದೆ’ ಎಂದು ಮುಖಂಡ ಡಾ.ಎಚ್‍.ಸಿ. ಮಹದೇವಪ್ಪ ಆರೋಪಿಸಿದರು.

ಪಟ್ಟಣದ ಬಣ್ಣಾರಿ ಮಾರಿಯಮ್ಮ ದೇವಾಲಯದ ಪಕ್ಕದಲ್ಲಿ ಶುಕ್ರವಾರ ತಿ.ನರಸೀಪುರ ಹಾಗೂ ವರುಣಾ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ನೂತನ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.

‘ಜನರ ಮೇಲೆ ಕಾಳಜಿ ಇಲ್ಲದ ಬಿಜೆಪಿ ಸರ್ಕಾರ ಸುಳ್ಳುಗಳನ್ನು ಹೇಳುತ್ತಿದೆ. ಧರ್ಮ, ಜಾತಿ ಹೆಸರಿನಲ್ಲಿ ಕೋಮುದ್ವೇಷ ಉಂಟುಮಾಡುತ್ತಿದೆ. ಇವರ ಆಡಳಿತದಲ್ಲಿ ಅಲ್ಪಸಂಖ್ಯಾತರು ಆತಂಕದಿಂದ ಬದುಕುವ ವಾತವರಣ ಉಂಟಾಗಿದೆ. ದೇಶದಲ್ಲಿ ಯಾವುದೇ ಜನಪರ ಕಾರ್ಯಗಳು ಆಗುತ್ತಿಲ್ಲ’ ಎಂದು ದೂರಿದರು.

ADVERTISEMENT

ಬ್ಲಾಕ್ ಅಧ್ಯಕ್ಷ ಎಂ.ಡಿ.ಬಸವರಾಜು, ವರುಣಾ ಶಾಸಕ ಡಾ. ಯತೀಂದ್ರ, ಕೆಪಿಸಿಸಿ ವೀಕ್ಷಕ ಚಿಕ್ಕಮಾದು, ಮುಖಂಡ ಸುನಿಲ್ ಬೋಸ್ ಮಾತನಾಡಿದರು.

ಪುರಸಭಾಧ‍್ಯಕ್ಷ ಮದನ್ ರಾಜ್, ಬನ್ನೂರು ಬ್ಲಾಕ್ ಅಧ್ಯಕ್ಷ ಚೆನ್ನಕೇಶವ, ಮುಖಂಡರಾದ ರಾಧಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.