ADVERTISEMENT

ಗುಣಮುಖರಾಗುತ್ತಿರುವ ನಟರು; ದೇವರಾಜ್, ಪ್ರಜ್ವಲ್ ಆಸ್ಪತ್ರೆಯಿಂದ ಮನೆಗೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2018, 11:52 IST
Last Updated 25 ಸೆಪ್ಟೆಂಬರ್ 2018, 11:52 IST
ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆಯಾದರು.
ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆಯಾದರು.   

ಮೈಸೂರು: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದೇವರಾಜ್, ದರ್ಶನ್, ಪ್ರಜ್ವಲ್ ದೇವರಾಜ್ ಹಾಗೂ ರಾಯ್ ಅಂಥೋಣಿಯಂ ಗುಣಮುಖರಾಗುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮಂಗಳವಾರ ಮಧ್ಯಾಹ್ನದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು. ದರ್ಶನ್ ಅವರು ಇನ್ನು ಒಂದು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ತೆಗೆದುಕೊಳ್ಳಬೇಕಿದ್ದು, ಬುಧವಾರ ಸಂಜೆ ಹೊತ್ತಿಗೆ ಮನೆಗೆ ತೆರಳುವ ನಿರೀಕ್ಷೆ ಇದೆ.

ಅಪಘಾತ ನಡೆದ ದಿನ ದೇವರಾಜ್ ಅವರ ಜನ್ಮ ದಿನದ ಔತಣಕೂಟವು ಖಾಸಗಿ ಹೋಟೆಲ್‌ವೊಂದರಲ್ಲಿ ಆಯೋಜನೆಗೊಂಡಿತ್ತು ಎಂಬ ಸುದ್ದಿ ಹೆಚ್ಚು ಬಲವಾಗುತ್ತಿದೆ. ದೇವರಾಜ್ ಅವರು ಕೇಕ್ ಕತ್ತರಿಸಿ ಹಂಚುತ್ತಿರುವ ದೃಶ್ಯಗಳಿರುವ ವಿಡಿಯೊ ತುಣುಕುಗಳು ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿವೆ. ನಟ ಸೃಜನ್ ಲೋಕೇಶ್ ಸಹ ಔತಣಕೂಟ ಮುಗಿಸಿ ಕೆಂಗೇರಿವರಗೆ ಹೋಗಿದ್ದರು. ಅಪಘಾತದ ಸುದ್ದಿ ತಿಳಿದು ವಾಪಸ್ಸಾದರು ಎಂದು ಮೂಲಗಳು ತಿಳಿಸಿವೆ.

ADVERTISEMENT

ಆಸ್ಪತ್ರೆಗೆ ದರ್ಶನ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಇವರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ.

ಜನ್ಮ ದಿನದ ಕೂಟದಲ್ಲಿದೇವರಾಜ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.