ADVERTISEMENT

ಮೈಸೂರು: ನನ್ನನೂ ಬಿಜೆಪಿಗೆ ಸೇರಿಸಿಕೊಳ್ಳಿ: ರೌಡಿಶೀಟರ್‌ ಪಾನಿಪುರಿ ಮಂಜ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 14:38 IST
Last Updated 3 ಡಿಸೆಂಬರ್ 2022, 14:38 IST
ಬ್ಯಾನರ್‌ ಹಿಡಿದು ಪ್ರತಿಭಟಿಸಿದ ಮಂಜು
ಬ್ಯಾನರ್‌ ಹಿಡಿದು ಪ್ರತಿಭಟಿಸಿದ ಮಂಜು   

ಮೈಸೂರು: ‘ಬಿಜೆಪಿಗರೇ, ನಾನು ರೌಡಿಶೀಟರ್‌, ನನಗೂ ನಿಮ್ಮ ಪಕ್ಷದಲ್ಲಿ ಸ್ಥಾನ ಕೊಡುವಿರಾ?’ ಎಂದು ಬರೆದಿದ್ದ ಬ್ಯಾನರ್ ಹಿಡಿದು, ಮಂಜು ಅಲಿಯಾಸ್ ಪಾನಿಪುರಿ ಮಂಜ ಎನ್ನುವವರು ನ್ಯಾಯಾಲಯದ ಮುಂಭಾಗದ ಗಾಂಧಿ ಪುತ್ಥಳಿ ಎದುರು ಶನಿವಾರ ಸಾರ್ವಜನಿಕರ ಗಮನಸೆಳೆದರು.

ಬಾಲಗಂಗಾಧರನಾಥ ಸ್ವಾಮೀಜಿ, ಸಿದ್ಧಗಂಗಾ ಸ್ವಾಮೀಜಿ, ಕನಕದಾಸ, ವಾಲ್ಮೀಕಿ, ಅಂಬೇಡ್ಕರ್ ಚಿತ್ರ ಹಾಕಿದ್ದ ಬ್ಯಾನರ್‌ ಹಿಡಿದಿದ್ದರು. ಗಣೇಶ ನಗರದ ನಿವಾಸಿಯಾದ ಅವರು, 2013ರಲ್ಲಿ ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಸೇರಿದ್ದರು ಎಂದು ತಿಳಿದುಬಂದಿದೆ.

ಅವರನ್ನು ಪೊಲೀಸರು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ಸಂಬಂಧ ಉದಯಗಿರಿ ಠಾಣೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ADVERTISEMENT

‘ರಾಜ್ಯದಲ್ಲಿ ಸಾಕಷ್ಟು ಮಂದಿ ರೌಡಿಶೀಟರ್‌ಗಳು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ. ಹೀಗಾಗಿ, ನನ್ನನ್ನೂ ಸೇರಿಸಿಕೊಳ್ಳುವಂತೆ ಗಮನಸೆಳೆದಿದ್ದೇನೆ’ ಎಂದು ಮಂಜು ‘ಪ್ರಜಾವಾಣಿ’ಗೆ ತಿಳಿಸಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.