ಮೈಸೂರು: ಚಲನಚಿತ್ರ ನಟ ಶಿವರಾಜ್ ಕುಮಾರ್ ಇಲ್ಲಿನ ಚಾಮರಾಜೇಂದ್ರ ಮೃಗಾಲಯದ ಆನೆ ‘ಪಾರ್ವತಿ’ಯನ್ನು ಒಂದು ವರ್ಷದ ಅವಧಿಗೆ ದತ್ತು ಪಡೆದಿದ್ದಾರೆ.
ಕೋವಿಡ್-19 ಸಂಕಷ್ಟದಲ್ಲಿ ನಟ ಶಿವರಾಜ್ ಕುಮಾರ್ ₹ 75 ಸಾವಿರ ಪಾವತಿಸಿ ‘ಪಾರ್ವತಿ’ಯನ್ನು 20-08-2020ರಿಂದ 19-08-2021ರ ಅವಧಿಗೆ ದತ್ತು ಪಡೆದು, ಮೃಗಾಲಯ ಮತ್ತು ಪ್ರಾಣಿಗಳ ನಿರ್ವಹಣೆಗೆ ಸಹಕಾರ ನೀಡಿರುವುದಕ್ಕೆ ಮೈಸೂರು ಮೃಗಾಲಯ ಅಭಿನಂದಿಸುತ್ತದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿದೇಶಕ ಅಜಿತ್ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.