ADVERTISEMENT

ಅನೈತಿಕ ಸಂಬಂಧ ಶಂಕೆ: ಪತಿಯನ್ನು ಕೊಲೆ ಮಾಡಿದ ಪತ್ನಿ ಬಂಧನ

​ಪ್ರಜಾವಾಣಿ ವಾರ್ತೆ
Published 22 ಜನವರಿ 2022, 10:03 IST
Last Updated 22 ಜನವರಿ 2022, 10:03 IST
   

ಸರಗೂರು: ತಾಲ್ಲೂಕಿನ ಮುಳ್ಳೂರು ಗ್ರಾಮದ ಬಸವರಾಜು(41) ಎಂಬುವವರನ್ನು ಅವರ ಪತ್ನಿ ನೇತ್ರಾವತಿ ಶುಕ್ರವಾರ ಕೊಲೆ ಮಾಡಿದ್ದು, ಶನಿವಾರ ಬೆಳಕಿಗೆ ‌ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪತಿಯು ಬೇರೊಬ್ಬ ಮಹಿಳೆಯೊಂದಿಗೆಅನೈತಿಕ ಸಂಬಂಧ ಹೊಂದಿದ್ದರು ಎಂಬ ಶಂಕೆಯ ಕಾರಣಕ್ಕೆ ಇಬ್ಬರ ನಡುವೆಯೂ ಜಗಳ ನಡೆಯುತ್ತಿತ್ತು. ರಾತ್ರಿ ಜಗಳ ತಾರಕಕ್ಕೇರಿ ಪತ್ನಿಯು ಪತಿಯ ಮರ್ಮಾಂಗಕ್ಕೆ ಹೊಡೆದು ಕೊಲೆ ಮಾಡಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ.

ಬಸವರಾಜು ಸಹೋದರ ಗುರುಸ್ವಾಮಿ ಸರಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.