ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಜೆಟ್ ನಿರಾಸೆ ಮೂಡಿಸಿದೆ. ಹಲವು ದ್ವಂದ್ವಗಳಿವೆ. ಶೂನ್ಯ ಬಂಡವಾಳ ಕೃಷಿ ಬಗ್ಗೆ ಮಾತನಾಡಿದ್ದಾರೆ. ಇದಕ್ಕೆ ಬೇಕಾಗಿರುವುದು ಮಾನವ ಸಂಪನ್ಮೂಲ. ಆದರೆ, ಕೌಶಲಾಭಿವೃದ್ಧಿ ತರಬೇತಿ ನೀಡಿ ಗ್ರಾಮೀಣ ಯುವಕರನ್ನು ಬೇರೆಯೇ ಕ್ಷೇತ್ರಗಳತ್ತ ಸೆಳೆಯುವ ಯೋಜನೆಯೂ ಇದೆ. ಆಗ ಕೃಷಿಗೆ ಮಾನವ ಸಂಪನ್ಮೂಲವೇ ಸಿಗುವುದಿಲ್ಲ. ರೈತರ ಆದಾಯವನ್ನು ಹೇಗೆ ದ್ವಿಗುಣಗೊಳಿಸುತ್ತಾರೆ ಎಂಬುದಕ್ಕೆ ಸ್ಪಷ್ಟತೆ ಇಲ್ಲ. ಕೃಷಿ ಕ್ಷೇತ್ರದಲ್ಲಿ ಮೂಲಸೌಕರ್ಯ, ವಿವಿಧ ಯೋಜನೆ ಕಲ್ಪಿಸಲು ಖಾಸಗಿ ಹೂಡಿಕೆದಾರರ ಮೊರೆ ಹೋಗುತ್ತಿರುವುದು ಅಪಾಯಕಾರಿ.
–ಕೆ.ಎಸ್.ನಂದಿನಿ ಜಯರಾಂ,
ರೈತ ಮುಖಂಡರು, ಮಂಡ್ಯ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.