ADVERTISEMENT

ಅನಂತಕುಮಾರ್‌ ಹೆಗಡೆ ವಿರುದ್ಧ ಪೊಲೀಸರಿಗೆ ದೂರು

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2020, 13:34 IST
Last Updated 10 ಫೆಬ್ರುವರಿ 2020, 13:34 IST
ಕಾಂಗ್ರೆಸ್ ನಗರ ಮತ್ತು ಜಿಲ್ಲಾ ಘಟಕದ ನಿಯೋಗವು ಸಂಸದ ಅನಂತರಕುಮಾರ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಷ್ಟ್ರಪತಿಯವರಿಗೆ ದೂರನ್ನು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಮೂಲಕ ಸೋಮವಾರ ಸಲ್ಲಿಸಿತು
ಕಾಂಗ್ರೆಸ್ ನಗರ ಮತ್ತು ಜಿಲ್ಲಾ ಘಟಕದ ನಿಯೋಗವು ಸಂಸದ ಅನಂತರಕುಮಾರ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಷ್ಟ್ರಪತಿಯವರಿಗೆ ದೂರನ್ನು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಮೂಲಕ ಸೋಮವಾರ ಸಲ್ಲಿಸಿತು   

ಮೈಸೂರು: ಸಂಸದ ಅನಂತಕುಮಾರ್‌ ಹೆಗಡೆ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಮತ್ತು ನಗರ ಘಟಕದ ವತಿಯಿಂದ ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಅವರಿಗೆ ಸೋಮವಾರ ದೂರು ಸಲ್ಲಿಸಲಾಯಿತು.

ಮಹಾತ್ಮ ಗಾಂಧಿ ಅವರನ್ನು ಕುರಿತು ಅನಂತಕುಮಾರ್‌ಹೆಗಡೆ ನೀಡಿರುವ ಹೇಳಿಕೆಯಿಂದ ರಾಜ್ಯದ ಜನತೆಗೆ ನೋವಾಗಿದೆ. ಇವರ ಹೇಳಿಕೆಗಳು ದೇಶದಲ್ಲಿ ಗೊಂದಲ ಮೂಡಿಸುತ್ತವೆ. ಹೀಗಾಗಿ, ಇವರ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಬೇಕು ಎಂದು ಕಾಂಗ್ರೆಸ್‌ನ ಜಿಲ್ಲಾ (ಗ್ರಾಮಾಂತರ) ಘಟಕದ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಅನಂತರಕುಮಾರ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಷ್ಟ್ರಪತಿಯವರಿಗೆ ದೂರನ್ನು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಮೂಲಕ ಇವರು ಸಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.