ADVERTISEMENT

ಮೈಸೂರಿನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2021, 2:28 IST
Last Updated 4 ಸೆಪ್ಟೆಂಬರ್ 2021, 2:28 IST
   

ಮೈಸೂರು: ಇಲ್ಲಿನ ಆರ್.ಎಸ್.ನಾಯ್ಡು ನಗರದಲ್ಲಿ ವಿದ್ಯಾರ್ಥಿನಿಯೊಬ್ಬರ ಮೇಲೆ ಅತ್ಯಾಚಾರ ನಡೆದಿರುವ ಕುರಿತು ಇಲ್ಲಿನ ಎನ್.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರು ಹೆಡೆಮುರಿಕಟ್ಟಿದ್ದಾರೆ.

‘ಮತ್ತೊಂದು ಅತ್ಯಾಚಾರ’ ಎಂಬ ಸುದ್ದಿ ವ್ಯಾಪಕವಾಗಿ ಹರಡಿ ಆರ್‌.ಎಸ್‌.ನಾಯ್ಡು ನಗರದ ಸ್ಥಳೀಯರಲ್ಲಿ ಭೀತಿಯ ವಾತಾವರಣ ಮೂಡಿಸಿತು. ಸ್ಥಳಕ್ಕೆ ಕೂಡಲೇ ದೌಡಾಯಿಸಿದ ಶ್ವಾನದಳ, ಬೆರಳಚ್ಚು ತಜ್ಞರ ತಂಡ ಪರಿಶೀಲನೆ ನಡೆಸಿತು. ಡಿಸಿಪಿ ಪ್ರದೀಪ್‌ ಗುಂಟಿ, ಗೀತಾ ಪ್ರಸನ್ನ, ಎನ್‌.ಆರ್‌.ಎಸಿಪಿ ಶಿವಶಂಕರ್, ಎನ್‌.ಆರ್.ಠಾಣೆ ಇನ್‌ಸ್ಪೆಕ್ಟರ್ ಅಜರುದ್ದೀನ್ ಹಾಗೂ ಸಿಬ್ಬಂದಿ ಮಿಂಚಿನ ಕಾರ್ಯಾಚರಣೆ ಕೈಗೊಂಡರು. ಪ್ರದೇಶದಲ್ಲಿ ಜನರು ಗುಂಪಾಗಿ ಸೇರಿ ವೀಕ್ಷಿಸಿದರು. ಪೊಲೀಸರು ಕೇಳಿದ ಮಾಹಿತಿಯನ್ನು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT