ADVERTISEMENT

ಎಚ್‌. ಡಿ. ಕೋಟೆ | ಕೃಷಿ ಪಂಡಿತ್, ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 11 ಜುಲೈ 2023, 14:31 IST
Last Updated 11 ಜುಲೈ 2023, 14:31 IST

ಎಚ್.ಡಿ.ಕೋಟೆ: 2023-24ನೇ ಸಾಲಿನ ತಾಲ್ಲೂಕು ಕೃಷಿ ಪಂಡಿತ, ಶ್ರೇಷ್ಠ ಕೃಷಿ ಪ್ರಶಸ್ತಿಗೆ ತಾಲ್ಲೂಕಿನ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಮಗ್ರ ಕೃಷಿ ಪದ್ಧತಿ, ಸಾವಯವ ಕೃಷಿ ಯಂತ್ರೋಪಕರಣಗಳ ಅಭಿವೃದ್ಧಿ, ಸಮಗ್ರ ನೀರು ನಿರ್ವಹಣೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಗಣೆ, ಮೀನುಗಾರಿಕೆ, ರೇಷ್ಮೆ ಕೃಷಿ, ಹೈಟೆಕ್ ಹಸಿರು ಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ, ಹಾಡು, ಕುರಿ ಮತ್ತು ಮೊಲ ಸಾಕಣೆ ಕ್ಷೇತ್ರದಲ್ಲಿ ಸಾಧನೆ ಮಾಡಿದ ರೈತರು ಜುಲೈ 20ರೊಳಗೆ ಅರ್ಜಿಯನ್ನು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಮಾಹಿತಿಗೆ ಮೊ.ಸಂ. 84537 82414 ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ರಂಗಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.