ADVERTISEMENT

ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: ಭದ್ರತೆ ಪರಿಶೀಲಿಸಿದ ಗೃಹ‌ ಸಚಿವ ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 19 ಜೂನ್ 2022, 3:30 IST
Last Updated 19 ಜೂನ್ 2022, 3:30 IST
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭದ್ರತೆಗೆ ತೆಗೆದುಕೊಳ್ಳಲಾದ ಕ್ರಮಗಳನ್ನು ಪರಿಶೀಲಿಸಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭದ್ರತೆಗೆ ತೆಗೆದುಕೊಳ್ಳಲಾದ ಕ್ರಮಗಳನ್ನು ಪರಿಶೀಲಿಸಿದರು.   

ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೂನ್ 20 ಹಾಗೂ 21ರಂದು ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಹಿನ್ನೆಲೆಯಲ್ಲಿ, ಭದ್ರತೆಗೆ ತೆಗೆದುಕೊಳ್ಳಲಾದ ಕ್ರಮಗಳನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಭಾನುವಾರ ಪರಿಶೀಲಿಸಿದರು.

ಯೋಗ ದಿನ ಕಾರ್ಯಕ್ರಮ ನಡೆಯಲಿರುವ ಅರಮನೆ ಆವರಣವನ್ನು ಪರಿಶೀಲಿಸಿದರು. ವೇದಿಕೆ, ಯೋಗ ಪಟುಗಳಿಗೆ ಮಾಡಿರುವ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದ ಪ್ರತಾಪ ಸಿಂಹ, ಶಾಸಕ ಎಲ್. ನಾಗೇಂದ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ಆಯುಕ್ತ ಚಂದ್ರಗುಪ್ತ, ಎಸ್ಪಿ ಚೇತನ್ ಇದ್ದರು.

ADVERTISEMENT
ಮೈಸೂರು ಅರಮನೆ ಆವರಣದಲ್ಲಿ ಭಾನುವಾರ ಬೆಳಿಗ್ಗೆ ಯೋಗ ತಾಲೀಮು ನಡೆಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.