ADVERTISEMENT

ಗಾಯಗೊಂಡಿದ್ದ ಎಎಸ್‌ಐ ಸಾವು

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 16:08 IST
Last Updated 12 ಜುಲೈ 2020, 16:08 IST
ಶ್ರೀನಿವಾಸನಾಯಕ
ಶ್ರೀನಿವಾಸನಾಯಕ   

ಯಳಂದೂರು: ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‌ಐ ಶ್ರೀನಿವಾಸನಾಯಕ ಭಾನುವಾರ ಮೈಸೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೃದಯಾಘಾತದಿಂದ ನಿಧನರಾದರು.

ಎರಡು ತಿಂಗಳ ಹಿಂದೆ ಕರ್ತವ್ಯ ಮುಗಿಸಿ, ಪೊಲೀಸ್ ಠಾಣೆಯಿಂದ ದ್ವಿಚಕ್ರದಲ್ಲಿ ಮನೆಗೆ ಹಿಂತಿರುಗುವಾಗ ಮಸೀದಿ ಬಳಿ ಪ್ರಜ್ಞೆ ತಪ್ಪಿ ಬಿದ್ದು ಗಾಯಗೊಂಡಿದ್ದರು ಎನ್ನಲಾಗಿದೆ.

ಇವರಿಗೆ ಪತ್ನಿ, ಪುತ್ರ, ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ.

ADVERTISEMENT

ಗುಂಡ್ಲುಪೇಟೆ ನಿವಾಸಿಯಾದ ಇವರ ಅಂತ್ಯಸಂಸ್ಕಾರ ಭಾನುವಾರ ಪಟ್ಟಣದ ರುದ್ರಭೂಮಿಯಲ್ಲಿ ನೆರವೇರಿತು. ಪೊಲೀಸ್‌ ಇಲಾಖೆ ಹಾಗೂ ತಾಲ್ಲೂಕು ನೌಕರರ ಸಂಘದ ವತಿಯಿಂದ ಸಂತಾಪ ಸೂಚಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.