ADVERTISEMENT

ದಾರಿ ಕೊಡದಿರುವುದಕ್ಕೆ ಚಾಲಕನ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2018, 20:10 IST
Last Updated 5 ನವೆಂಬರ್ 2018, 20:10 IST

ಮೈಸೂರು: ಚಾಲನೆ ಮಾಡುವಾಗ ರಸ್ತೆಯಲ್ಲಿ ದಾರಿ ಕೊಡಲಿಲ್ಲ ಎಂಬ ಕಾರಣಕ್ಕೆ ಬೈಕ್‌ ಸವಾರರಿಬ್ಬರು ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಕೆ.ಆರ್.ಅರುಣ್ ಅವರ ಮೇಲೆ ಇಲ್ಲಿನ ನಂಜನಗೂಡು ರಸ್ತೆಯ ಗುಂಡೂರಾವ್ ನಗರದ ಬಳಿ ಭಾನುವಾರ ಬೆಳಿಗ್ಗೆ ಹಲ್ಲೆ ನಡೆಸಿದ್ದಾರೆ.

‌ಹಿಂದಿನಿಂದ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿಗಳು ಬಸ್‌ನ್ನು ಅಡ್ಡಗಟ್ಟಿದ್ದಾರೆ. ನಂತರ, ಚಾಲಕನನ್ನು ಹೊರಗೆಳೆದು ಮನಬಂದಂತೆ ಥಳಿಸಿದ್ದಾರೆ. ಇದರಿಂದ ಕರ್ತವ್ಯ ನಿರ್ವಹಿಸಲು ಅಡ್ಡಿಯಾಯಿತು, ಪ್ರಯಾಣಿಕರಿಗೂ ತೊಂದರೆಯಾಯಿತು ಎಂದು ಅವರು ದೂರು ನೀಡಿದ್ದಾರೆ. ಪ‍್ರಕರಣ ದಾಖಲಿಸಿಕೊಂಡಿರುವ ಕೆ.ಆರ್.ಠಾಣೆಯ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT