ನಂಜನಗೂಡು (ಮೈಸೂರು): ತಾಲ್ಲೂಕಿನ ತಗಡೂರಿನ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಪ್ರಾಂಶುಪಾಲ ಸೇರಿ ನಾಲ್ವರನ್ನು ಅಮಾನತುಗೊಳಿಸಿ, ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಆದೇಶ ಹೊರಡಿಸಿದ್ದಾರೆ.
ಪ್ರಾಂಶುಪಾಲೆ ವಸಂತ ಕುಮಾರಿ, ಪ್ರಭಾರ ನಿಲಯಪಾಲಕ ಮಹದೇವಪ್ಪ, ಗಣಿತ ವಿಷಯ ಶಿಕ್ಷಕ ಮಂಜುನಾಥ್, ಅತಿಥಿ ಶಿಕ್ಷಕ ಗಣೇಶ್ ಅಮಾನತು ಮಾಡಲಾಗಿದೆ. ‘ಮೂಲಸೌಕರ್ಯ ಕಲ್ಪಿಸಿಲ್ಲ’ ಎಂದು ಆರೋಪಿಸಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾನುವಾರ ಪ್ರತಿಭಟಿಸಿ, ಕ್ರಮಕ್ಕೆ ಒತ್ತಾಯಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.