ಮೈಸೂರು: ‘ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ನನಗೆ ಬಿ ಫಾರಂ ಕೊಡುತ್ತಿದ್ದಾರೆ’ ಎಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮಾವಿನಹಳ್ಳಿ ಸಿದ್ದೇಗೌಡ ತಿಳಿಸಿದರು.
ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ ಹಾಗೂ ಪಂಗಡ ವಿಭಾಗದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಚುನಾವಣೆಯಲ್ಲಿ ಟಿಕೆಟ್ ತಮಗೇ ಎಂದು ಘೋಷಿಸಿಕೊಂಡರು.
‘ರೈತನ ಮಗನಾದ ನನಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೇರಿದಂತೆ ಎಲ್ಲರೂ ಎಲ್ಲ ರೀತಿಯಿಂದಲೂ ಸಹಾಯ ಮಾಡಬೇಕು’ ಎಂದು ನೆರೆದಿದ್ದ ಎಲ್ಲರತ್ತ ಕೈಮುಗಿದು ಕೇಳಿಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.