ADVERTISEMENT

ಮೈಸೂರಿನಲ್ಲಿ ಬ್ಯಾಂಕ್ ನೌಕರರ ಮುಷ್ಕರ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2021, 6:43 IST
Last Updated 16 ಡಿಸೆಂಬರ್ 2021, 6:43 IST
ರಾಷ್ಟ್ರೀಕೃತ ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್‌ ಸಂಘಟನೆಗಳ ಸಂಯುಕ್ತ ವೇದಿಕೆಯ (ಯುಎಫ್‌ಬಿಯು) ಕಾರ್ಯಕರ್ತರ ಪ್ರತಿಭಟನೆ
ರಾಷ್ಟ್ರೀಕೃತ ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್‌ ಸಂಘಟನೆಗಳ ಸಂಯುಕ್ತ ವೇದಿಕೆಯ (ಯುಎಫ್‌ಬಿಯು) ಕಾರ್ಯಕರ್ತರ ಪ್ರತಿಭಟನೆ   

ಮೈಸೂರು: ರಾಷ್ಟ್ರೀಕೃತ ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್‌ ಸಂಘಟನೆಗಳ ಸಂಯುಕ್ತ ವೇದಿಕೆಯ (ಯುಎಫ್‌ಬಿಯು) ಕಾರ್ಯಕರ್ತರು ಗುರುವಾರ ಇಲ್ಲಿ ಪ್ರತಿಭನೆ ನಡೆಸಿದರು.

ಇಲ್ಲಿನ ಟಿ.ಕೆ.ಬಡಾವಣೆಯ ಭಾರತೀಯ ಸ್ಟೇಟ್ ಬ್ಯಾಂಕಿನ ಪ್ರಾದೇಶಿಕ ಕಚೇರಿಯ ಆವರಣದಲ್ಲಿ ಸೇರಿದ ಪ್ರತಿಭಟನಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು‌.

ಬ್ಯಾಂಕ್‌ಗಳ ಖಾಸಗೀಕರಣವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಎರಡು ಬ್ಯಾಂಕ್‌ಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದು ಸರಿಯಲ್ಲ. ಇದರಿಂದ ಬ್ಯಾಂಕ್ ನೌಕರರಿಗೆ ಮಾತ್ರವಲ್ಲ ಜನಸಾಮಾನ್ಯರಿಗೂ ತೊಂದರೆಯಾಗುತ್ತದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.