ಬನ್ನೂರು (ಮೈಸೂರು): ಪಟ್ಟಣದ ಪುರಸಭೆಯ ಮುಖ್ಯಾಧಿಕಾರಿ ಪುಷ್ಪಲತಾ, ಕಾಮಗಾರಿ ಬಿಲ್ ಪಾವತಿಗಾಗಿ ಗುತ್ತಿಗೆದಾರರೊಬ್ಬರಿಂದ ಬುಧವಾರ ಸಂಜೆ ₹ 25 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೋಲಿಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಗುತ್ತಿಗೆದಾರ ಆನಂದ್ ಅವರು ನಿರ್ವಹಿಸಿದ್ದ ಕಾಮಗಾರಿಗಾಗಿ ₹ 13 ಲಕ್ಷ ಪಾವತಿಸಲು ಪುಷ್ಪಲತಾ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪುರಸಭಾ ಕಾರ್ಯಾಲಯದಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.
ಕಾರ್ಯಾಚರಣೆ ತಂಡದಲ್ಲಿ ಎಸಿಬಿ ಎಸ್ಪಿ ಸುಮನ್ ಡಿ ಪನ್ನೆಕರ್, ಡಿವೈಎಸ್ಪಿ ಪರಶುರಾಮಪ್ಪ, ಇನ್ಸ್ಪೆಕ್ಟರ್ಗಳಾದ ಕರೀಮ್ ರಾವತರ್, ನಿರಂಜನ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.