ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಹೊಸ ಬೀರ್ವಾಳು ಗ್ರಾಮದ ಬಳಿ ಉರುಳಿಗೆ ಸಿಲುಕಿದ್ದ 5 ವರ್ಷದ ಗಂಡು ಕರಡಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪಶು ವೈದ್ಯರು ರಕ್ಷಿಸಿದ್ದಾರೆ.
ಕರಡಿ ಉರುಳಿಗೆ ಸಿಲುಕಿ ಸಾವು ಬದುಕಿನ ನಡುವೆ ಒದ್ದಾಡುತ್ತಿದೆ ಎಂದು ಗ್ರಾಮಸ್ಥರೊಬ್ಬರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪಶು ವೈದ್ಯ ನಾಗರಾಜು ಅರಿವಳಿಕೆ ನೀಡಿದರು. ಪ್ರಜ್ಞೆ ತಪ್ಪಿದ ಕರಡಿಯನ್ನು ಬಲೆ ಹಾಕಿ ಹಿಡಿಯಲಾಯಿತು. ನಂತರ, ಇದನ್ನು ಯಡಿಯಾಲ ಅರಣ್ಯಕ್ಕೆ ಬಿಡಲಾಯಿತು ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.