ಮೈಸೂರು: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ 113ನೇ ಜನ್ಮ ದಿನಾಚರಣೆ ಯನ್ನುಸೋಮವಾರನಗರದವಿವಿಧೆಡೆಆಚರಿಸಲಾಯಿತು.
ಮುಖಂಡರು ಭಗತ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪನ ಮನ ಸಲ್ಲಿಸಿದರು.ಬೇರು ಫೌಂಡೇ ಷನ್ ವತಿಯಿಂದ ಮೆಟ್ರೊ ಪೋಲ್ ವೃತ್ತದಲ್ಲಿಜೈ ಹಿಂದ್ ಕಾರ್ಯಕ್ರಮಆಯೋಜಿಸಲಾಗಿತ್ತು.
‘ಬ್ರಿಟಿಷರ ಎದೆ ನಡುಗಿಸಿದ ದೇಶಭಕ್ತ ಭಗತ್ ಸಿಂಗ್ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು.ಬ್ರಿಟಿಷರ ಕಪಿಮುಷ್ಟಿಯಿಂದ ದೇಶವನ್ನು ಮುಕ್ತ ಗೊಳಿಸಲು ಕ್ರಾಂತಿಕಾರಿ ಮಾರ್ಗ ಅನುಸರಿಸಿದ್ದರು.ಅವರು ದೇಶದ ಜನತೆಗೆ ಪ್ರೇರಣೆ. 23ನೇ ವಯಸ್ಸಲ್ಲೇ ದೇಶಕ್ಕಾಗಿ ಪ್ರಾಣ ಅರ್ಪಿಸಿದರು’ ಎಂದು ಶಾಸಕ ಎಲ್.ನಾಗೇಂದ್ರ ತಿಳಿಸಿದರು.
ಡಿಟಿಎಸ್ ಫೌಂಡೇಶನ್ ಅಧ್ಯಕ್ಷ ಡಿ.ಟಿ.ಪ್ರಕಾಶ್, ರಘುರಾಂ ವಾಜಪೇಯಿ, ಬೇರು ಫೌಂಡೇಷನ್ ಅಧ್ಯಕ್ಷ ಮಧು, ಪಾಲಿಕೆ ಸದಸ್ಯೆ ಪ್ರಮೀಳಾ ಭರತ್, ಪ್ರಧಾನ ಕಾರ್ಯದರ್ಶಿ ಜೈ ಅರ್ಜುನ್, ಯುವ ಮುಖಂಡ ವಿಕ್ರಂ ಅಯ್ಯಂಗಾರ್, ಬಿಜೆಪಿ ಮುಖಂಡ ಜೋಗಿ ಮಂಜು, ಬಿಜೆಪಿ ಮಾಧ್ಯಮ ಸಂಚಾಲಕ ಪ್ರದೀಪ್ ಕುಮಾರ್, ರಾಕೇಶ್ ಭಟ್, ಅಜಯ್ ಶಾಸ್ತ್ರಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.