ADVERTISEMENT

ಪೊಲೀಸ್‌ ಕಮಿಷನರ್ ಸ್ಥಾನಕ್ಕೆ ಪಾಲ್‌ ನೇಮಕ ಪ್ರಯತ್ನ: ಭಾಸ್ಕರರಾವ್

​ಪ್ರಜಾವಾಣಿ ವಾರ್ತೆ
Published 18 ಮೇ 2022, 20:01 IST
Last Updated 18 ಮೇ 2022, 20:01 IST

ಮೈಸೂರು: ‘ನಾನು ಪೊಲೀಸ್ ಕಮೀಷನರ್ ಆಗಿರುವಾಗ, ಆ ಸ್ಥಾನಕ್ಕೆ ಹಿರಿಯ ಅಧಿಕಾರಿಗಳಿದ್ದರೂ, ತುಂಬಾ ಕಿರಿಯ ಬ್ಯಾಚ್‌ನ ಅಧಿಕಾರಿಯಾಗಿದ್ದ ಅಮೃತ್ ಪಾಲ್ ಅವರನ್ನು ನೇಮಿಸುವ ಪ್ರಯತ್ನ ನಡೆದಿತ್ತು. ಅಚ್ಚರಿ ಜೊತೆಗೆ ಅನುಮಾನವನ್ನೂ ಮೂಡಿಸಿತ್ತು’ ಎಂದು ಆಮ್‌ ಆದ್ಮಿ ಪಕ್ಷದ ಮುಖಂಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಪಿಎಸ್ಐ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿ ಪಾಲ್ ಅವರು ರಾಜಕೀಯ ಒತ್ತಡಕ್ಕೆ ಒಳಗಾಗಿರುವ ಸಾಧ್ಯತೆ ಇದೆ, ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ ದೇಶದಲ್ಲಿಯೇ ಮಾದರಿಯಾಗಿದ್ದ ಪರೀಕ್ಷೆ ಹಾಗೂ ಆಯ್ಕೆ ವಿಧಾನದಲ್ಲಿ ಅಕ್ರಮ ಕಂಡುಬಂದಿರುವುದರಿಂದ ಹಿರಿಯ ಅಧಿಕಾರಿಗಳು ತಲೆ ತಗ್ಗಿಸಬೇಕಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT