ADVERTISEMENT

ಮೈಸೂರಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಭೇಟಿ: ವೈದ್ಯರಿಂದ ಆರೋಗ್ಯ ಸಲಹೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2024, 15:58 IST
Last Updated 20 ಮಾರ್ಚ್ 2024, 15:58 IST
<div class="paragraphs"><p>ನಿತೀಶ್‌ ಕುಮಾರ್</p></div>

ನಿತೀಶ್‌ ಕುಮಾರ್

   

ಮೈಸೂರು: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಬುಧವಾರ ನಗರಕ್ಕೆ ಆಗಮಿಸಿದ್ದು, ವೈದ್ಯರೊಬ್ಬರನ್ನು ಭೇಟಿಯಾಗಿ ಆರೋಗ್ಯ ಸಲಹೆ ಪಡೆದರು.

ಬೆಳಿಗ್ಗೆ 11.15ರ ಸುಮಾರಿಗೆ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಬಂದ ಅವರು, ನಂತರ ಖಾಸಗಿ ಕಾರಿನಲ್ಲಿ ನಗರದ ನಂಜುಮಳಿಗೆ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯೊಂದಕ್ಕೆ ತೆರಳಿದರು. ಅಲ್ಲಿ ನರರೋಗ ತಜ್ಞ ಜಿ.ಎಸ್. ಜನಾರ್ಧನ್‌ ಅವರನ್ನು ಭೇಟಿ ಮಾಡಿ ಆರೋಗ್ಯ ಸಲಹೆ ಪಡೆದರು. ಬಳಿಕ ವಿಶೇಷ ವಿಮಾನದ ಮೂಲಕ ಇಲ್ಲಿಂದ ವಾಪಸ್‌ ಆದರು ಎಂದು ಮೂಲಗಳು ತಿಳಿಸಿವೆ.

ADVERTISEMENT

ನಿತೀಶ್‌ ಅವರಿಗೆ ರಾಜ್ಯಸಭಾ ಸದಸ್ಯ ಸಂಜಯ್‌ಕುಮಾರ್ ಝಾ ಸೇರಿದಂತೆ ಜೆಡಿಯು ಮುಖಂಡರು ಸಾಥ್‌ ನೀಡಿದರು. ಇದೊಂದು ಖಾಸಗಿ ಭೇಟಿಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.