ADVERTISEMENT

ಬಿಜೆಪಿಯಿಂದ ಸಂಭ್ರಮಾಚರಣೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2019, 20:06 IST
Last Updated 23 ಜುಲೈ 2019, 20:06 IST
ಬಿ.ಎಸ್‌.ಯಡಿಯೂರಪ್ಪ ಅಭಿಮಾನಿ ಬಳಗದ ಸದಸ್ಯರು ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ಮಂಗಳವಾರ ರಾತ್ರಿ ಜಮಾಯಿಸಿ ಬಿಎಸ್‌ವೈ ಪೋಸ್ಟರ್‌ಗಳನ್ನಿಡಿದು ಜಯಘೋಷ ಮೊಳಗಿಸಿದರು
ಬಿ.ಎಸ್‌.ಯಡಿಯೂರಪ್ಪ ಅಭಿಮಾನಿ ಬಳಗದ ಸದಸ್ಯರು ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ಮಂಗಳವಾರ ರಾತ್ರಿ ಜಮಾಯಿಸಿ ಬಿಎಸ್‌ವೈ ಪೋಸ್ಟರ್‌ಗಳನ್ನಿಡಿದು ಜಯಘೋಷ ಮೊಳಗಿಸಿದರು   

ಮೈಸೂರು: ವಿಧಾನಸಭೆಯಲ್ಲಿ ಸಮ್ಮಿಶ್ರ ಸರ್ಕಾರ ವಿಶ್ವಾಸ ಮತ ಕಳೆದುಕೊಂಡು, ಪತನಗೊಂಡಿದ್ದರಿಂದ ಬಿಜೆಪಿ ಕಾರ್ಯಕರ್ತರು ಮಂಗಳವಾರ ರಾತ್ರಿ ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸಂಭ್ರಮಾಚರಣೆ ನಡೆಸಿದರು.

ಬಿ.ಎಸ್‌.ಯಡಿಯೂರಪ್ಪ ಅಭಿಮಾನಿ ಬಳಗದ ಸದಸ್ಯರು ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ಜಮಾಯಿಸಿ ಬಿಎಸ್‌ವೈ ಪೋಸ್ಟರ್‌ಗಳನ್ನಿಡಿದು ಜಯಘೋಷ ಮೊಳಗಿಸಿದರು. ಬಿಜೆಪಿ ಕಾರ್ಯಕರ್ತರು ಸಾಥ್‌ ನೀಡಿದರು. ಪರಸ್ಪರರು ಸಿಹಿ ಹಂಚಿಕೊಂಡು ಸಂಭ್ರಮಿಸಿದರು.

ಬಿಜೆಪಿ ಯುವ ಮುಖಂಡ ಕಡಕೋಳ ಜಗದೀಶ್, ವಿಕ್ರಂ ಅಯ್ಯಂಗಾರ್, ಕೆ.ಎಂ.ನಿಶಾಂತ್, ಲೋಹಿತ್, ರಂಗನಾಥ್, ಸುಚೀಂದ್ರ, ಚಕ್ರಪಾಣಿ, ಜಯಸಿಂಹ, ಶ್ರೀಧರ್, ನವೀನ್ ಶೆಟ್ಟಿ ಸೇರಿದಂತೆ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.