ADVERTISEMENT

ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆ ನಿವೃತ್ತ ಪ್ರಾಂಶುಪಾಲ ಬಿ.ಎಸ್.ಶ್ರೀಕಂಠಯ್ಯ ನಿಧನ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 11:13 IST
Last Updated 28 ಸೆಪ್ಟೆಂಬರ್ 2020, 11:13 IST
ಮೈಸೂರಿನ ರಾಮಕೃಷ್ಣ ಆಶ್ರಮದ ರಾಮಕೃಷ್ಣ ವಿದ್ಯಾಶಾಲೆಯ ನಿವೃತ್ತ ಪ್ರಾಂಶುಪಾಲ ಬಿ.ಎಸ್.ಶ್ರೀಕಂಠಯ್ಯ
ಮೈಸೂರಿನ ರಾಮಕೃಷ್ಣ ಆಶ್ರಮದ ರಾಮಕೃಷ್ಣ ವಿದ್ಯಾಶಾಲೆಯ ನಿವೃತ್ತ ಪ್ರಾಂಶುಪಾಲ ಬಿ.ಎಸ್.ಶ್ರೀಕಂಠಯ್ಯ   

ಬೆಂಗಳೂರು: ಮೈಸೂರಿನ ರಾಮಕೃಷ್ಣ ಆಶ್ರಮದ ರಾಮಕೃಷ್ಣ ವಿದ್ಯಾಶಾಲೆಯ ನಿವೃತ್ತ ಪ್ರಾಂಶುಪಾಲ ಬಿ.ಎಸ್.ಶ್ರೀಕಂಠಯ್ಯ (90) ಅವರು ಅನಾರೋಗ್ಯ ಸಮಸ್ಯೆಯಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆ ನಿಧನರಾದರು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಎರಡು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ರೀಕಂಠಯ್ಯ ಅವರು ಸಂಸ್ಥೆಯಲ್ಲಿ 1953ರಿಂದ ಸೇವೆ ಆರಂಭಿಸಿದ್ದರು. ನಿವೃತ್ತಿ ಬಳಿಕ ಸಂಯೋಜನಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಮೈಸೂರಿನ ವಿಜಯನಗರದ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ಸೋಮವಾರ ನೆರವೇರಿತು ಎಂದು ರಾಮಕೃಷ್ಣ ಆಶ್ರಮದ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.