ಮೈಸೂರು: ಎದೆನೋವಿನ ಕಾರಣ ಶಾಸಕ ಎಸ್.ಎ.ರಾಮ ದಾಸ್ ಅವರು ಸೋಮವಾರ ಬೆಳಿಗ್ಗೆ ಇಲ್ಲಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡರು.
‘ಎದೆನೋವಿನ ಕಾರಣ ಪರೀಕ್ಷೆ ಮಾಡಿಸಿಕೊಳ್ಳಲೆಂದು ಬೆಳಿಗ್ಗೆ ಆಸ್ಪತ್ರೆಗೆ ಹೋದರು. ವೈದ್ಯರು ವಿವಿಧ ಪರೀಕ್ಷೆಗೆ ಒಳಪಡಿಸಿದರು. ಬಳಿಕ ಕೋವಿಡ್ ಪರೀಕ್ಷೆ ಕೂಡ ಮಾಡಿದ್ದು, ವರದಿ ನೆಗೆಟಿವ್ ಬಂದಿದೆ. ಸ್ವಲ್ಪ ಹೊತ್ತು ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆದು ಮಧ್ಯಾಹ್ನದ ವೇಳೆಗೆ ಮನೆಗೆ ಬಂದರು. ಯಾವುದೇ ಸಮಸ್ಯೆ ಇಲ್ಲ’ ಎಂದು ಶಾಸಕರ ಆಪ್ತ ಮೂಲಗಳು ತಿಳಿಸಿವೆ.
ಫೆಬ್ರುವರಿಯಲ್ಲಿ ಲಘು ಹೃದಯಾಘಾತಕ್ಕೆ ಒಳಗಾಗಿದ್ದ ರಾಮದಾಸ್, ನಗರದ ಅಪೊಲೊ–ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.