ADVERTISEMENT

ಅಲ್‌ಕೈದಾ ಹೇಳಿಕೆ – ವಿಚಾರಣೆಗೆ ಸೂಚನೆ: ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2022, 20:01 IST
Last Updated 7 ಏಪ್ರಿಲ್ 2022, 20:01 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಮೈಸೂರು:‘ಜನರಲ್ಲಿ ಅಶಾಂತಿ, ಗೊಂದಲ ಸೃಷ್ಟಿಸಲು ಕೆಲ ಶಕ್ತಿಗಳು ಪ್ರಯತ್ನ ನಡೆಸುತ್ತಿದ್ದು, ದೇಶದ ಕಾನೂನಿಗೆ ವಿರುದ್ಧವಾಗಿ ವರ್ತಿಸುತ್ತಿವೆ. ಅದರ ಒಂದು ಭಾಗವಾಗಿ ಅಲ್‌ಕೈದಾ ಎಂದು ಹೇಳಿಕೊಂಡು ವಿಡಿಯೊ ಹರಿಬಿಡಲಾಗಿದೆ. ಅದರ ನೈಜತೆ ಬಗ್ಗೆ ವಿಚಾರಣೆ ನಡೆಸಲು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.