ಮೈಸೂರು: ಜಂಬೂಸವಾರಿ ಮೆರವಣಿಗೆಗೂ ಮುನ್ನ, ನಂದಿಧ್ವಜ ಪೂಜೆ ನೆರವೇರಿಸಿದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾಲಿಗೆ ಬಿಜೆಪಿ ಮುಖಂಡ ಕಾ.ಪು.ಸಿದ್ಧಲಿಂಗಸ್ವಾಮಿ ಚಪ್ಪಲಿ ತೊಡಿಸಿದರು.
ನೆಲವು ಬಿಸಿಲಿಗೆ ಕಾದು ಸುಡುತ್ತಿತ್ತು. ಇದರಿಂದ ಕೆಲಕಾಲ ಯಡಿಯೂರಪ್ಪ ಪರಿತಪಿಸಿದರು. ಇದನ್ನು ಕಂಡ ಸಿದ್ಧಲಿಂಗಸ್ವಾಮಿ, ದೂರದಲ್ಲಿ ಬಿಟ್ಟಿದ್ದ ಚಪ್ಪಲಿಯನ್ನು ಕೈಯಿಂದ ತಂದು ಕೊಟ್ಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.