ADVERTISEMENT

ದಸರಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರವಾಸ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2022, 16:14 IST
Last Updated 23 ಸೆಪ್ಟೆಂಬರ್ 2022, 16:14 IST
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)   

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೆ.25 ಹಾಗೂ 26ರಂದು ನಗರದಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಸೆ.25ರಂದು ಮಧ್ಯಾಹ್ನ 3.05ಕ್ಕೆ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬಂದಿಳಿಯುವರು. ಮಧ್ಯಾಹ್ನ 3.30ಕ್ಕೆ ಕೆಎಸ್‌ಒಯು ಶತಮಾನೋತ್ಸವ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ಆಯೋಜಿಸಿರುವ ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 4.30ಕ್ಕೆ ವಿದ್ಯಾರಣ್ಯಪುರಂನ ರಾಮಲಿಂಗೇಶ್ವರ ಉದ್ಯಾನದಲ್ಲಿ ಆಯೋಜಿಸಿರುವ ‘ಮೋದಿ ಯುಗ ಉತ್ಸವ’ದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ ವಾಸ್ತವ್ಯ ಹೂಡುವರು.

ಸೆ.26ರಂದು ಬೆಳಿಗ್ಗೆ 9ಕ್ಕೆ ವಿಮಾನನಿಲ್ದಾಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬರಮಾಡಿಕೊಳ್ಳುವರು. ಬೆಳಿಗ್ಗೆ 10ಕ್ಕೆ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 11.05ಕ್ಕೆ ವಿಮಾನದಲ್ಲಿ ರಾಷ್ಟ್ರಪತಿ ಜೊತೆ ಹುಬ್ಬಳ್ಳಿಗೆ ತೆರಳುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.