ಮೈಸೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅ.16ರಿಂದ 19ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅ. 16ರಂದು ರಾತ್ರಿ 8.30ಕ್ಕೆ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅ. 17ರಂದು ಬೆಳಿಗ್ಗೆ 9ಕ್ಕೆ ಕೊಡಗಿಗೆ ತೆರಳಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾತ್ರಿ 10ಕ್ಕೆ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅ. 18ರಂದು ಬೆಳಿಗ್ಗೆ 8ಕ್ಕೆ ಮೈಸೂರಿನ ಹೆಬ್ಬಾಳ ಕೆರೆ ವೀಕ್ಷಿಸುವರು. ಸಂಜೆ 4.30ಕ್ಕೆ ಮಂಡ್ಯ ಜಿಲ್ಲೆಗೆ ತೆರಳಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮೈಸೂರಿಗೆ ಬಂದು ವಾಸ್ತವ್ಯ ಹೂಡಲಿದ್ದಾರೆ.
ಅ. 19ರಂದು ಬೆಳಿಗ್ಗೆ 9ಕ್ಕೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿ ಮಧ್ಯಾಹ್ನ 2.30ಕ್ಕೆ ಅರಮನೆ ಆವರಣದ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವರು. ಮಧ್ಯಾಹ್ನ 3.40ಕ್ಕೆ ಅರಮನೆ ಒಳ ಆವರಣದಲ್ಲಿ ವಿಜಯದಶಮಿ ಮೆರವಣಿಗೆ ಉದ್ಘಾಟನೆ ಮತ್ತು ವೀಕ್ಷಣೆ ನಡೆಸಲಿದ್ದಾರೆ. ರಾತ್ರಿ 7ಕ್ಕೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು ವೀಕ್ಷಿಸಲಿದ್ದಾರೆ. ರಾತ್ರಿ 10.30ಕ್ಕೆ ರಸ್ತೆ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.