ADVERTISEMENT

‘ದೇವರಾಜ ಮಾರುಕಟ್ಟೆಯಲ್ಲಿ ಸಿ.ಎಂ ವಾಸ್ತವ್ಯ ಹೂಡಲಿ’

​ಪ್ರಜಾವಾಣಿ ವಾರ್ತೆ
Published 9 ಜೂನ್ 2019, 18:30 IST
Last Updated 9 ಜೂನ್ 2019, 18:30 IST

ಮೈಸೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಮಾಡುವುದು ಒಳ್ಳೆಯ ವಿಚಾರ. ಆದರೆ ಅದರ ಜತೆಯಲ್ಲಿ ಮೈಸೂರನ್ನು ನೆನಪಿಸಿಕೊಂಡರೆ ಒಳ್ಳೆಯದಿತ್ತು ಎಂದು ಶಾಸಕ ಎಲ್‌.ನಾಗೇಂದ್ರ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ‘ಪಾರಂಪರಿಕ ನಗರಿ ಮೈಸೂರು ವಿಶ್ವದಲ್ಲೇ ಹೆಸರು ಮಾಡಿದೆ. ಆದರೆ ಇಲ್ಲಿನ ಹಲವು ಪಾರಂಪರಿಕ ಕಟ್ಟಡಗಳು ಸೂಕ್ತ ನಿರ್ವಹಣೆಯಿಲ್ಲದೆ ಕುಸಿದು ಬೀಳುತ್ತಿವೆ. ಇಂತಹ ಕಟ್ಟಡಗಳ ಸಂರಕ್ಷಣೆಯತ್ತ ಮುಖ್ಯಮಂತ್ರಿ ಗಮನ ಹರಿಸಲಿ. ಮೊದಲು ದೇವರಾಜ ಮಾರುಕಟ್ಟೆಯಲ್ಲಿ ವಾಸ್ತವ್ಯ ಮಾಡಲಿ. ನಾನೂ ಅವರ ಜತೆ ವಾಸ್ತವ್ಯ ಮಾಡುತ್ತೇನೆ’ ಎಂದರು.

ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡ ಬಳಿಕ ಗ್ರಾಮ ವಾಸ್ತವ್ಯದ ನೆನಪಾಗಿದೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಮತದಾರರು ನೀಡಿದ ತೀರ್ಪಿನಿಂದ ಮುಖ್ಯಮಂತ್ರಿ ಕಂಗೆಟ್ಟಿದ್ದಾರೆ. ಆದ್ದರಿಂದ ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.