ADVERTISEMENT

ಗುಂಡ್ರೆ ವನ್ಯಜೀವಿ ವಲಯದಲ್ಲಿ ಎಎನ್‌ಎಫ್‌ ಶೋಧ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2020, 20:37 IST
Last Updated 27 ಡಿಸೆಂಬರ್ 2020, 20:37 IST

ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಗುಂಡ್ರೆ ವನ್ಯಜೀವಿ ವಲಯದಲ್ಲಿ ನಕ್ಸಲ್ ನಿಗ್ರಹ ಪಡೆಯ ಸಿಬ್ಬಂದಿ ಭಾನುವಾರ ಶೋಧ ಕಾರ್ಯ ನಡೆಸಿದರು.

ಅರಣ್ಯಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಅವರು ಮಾಹಿತಿ ವಿನಿಮಯ ಮಾಡಿಕೊಂಡರು. ಈ ಕುರಿತು ‘ಪ್ರಜಾವಾಣಿ’ ಹೆಚ್ಚುವರಿ ಜಿಲ್ಲಾ ಎಸ್ಪಿ ಶಿವಕುಮಾರ್ ಅವರನ್ನು ಸಂಪರ್ಕಿಸಿದಾಗ, ಶೋಧ ಕಾರ್ಯಾಚರಣೆ ನಡೆದಿರುವುದನ್ನು ಖಚಿತಪಡಿಸಿದರು.

‘ಇದೊಂದು ಸಹಜ ಕಾರ್ಯಾಚರಣೆಯಾಗಿದೆ. ನಕ್ಸಲರ ಚಲನವಲನಗಳು ಕೇರಳ ಭಾಗಕ್ಕೆ ಹೊಂದಿಕೊಂಡಿರುವ ರಾಜ್ಯದ ಅರಣ್ಯ ಪ್ರದೇಶದಲ್ಲಿ ಇದುವರೆಗೂ ಕಂಡು ಬಂದಿಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.