ADVERTISEMENT

ರೋಹಿಣಿ ಸಿಂಧೂರಿ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 5:13 IST
Last Updated 22 ಜೂನ್ 2021, 5:13 IST

ಮೈಸೂರು: ಚಾಮರಾಜನಗರದಲ್ಲಿ ಈಚೆಗೆ ನಡೆದ ಆಮ್ಲಜನಕ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಈ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಚಾಮರಾಜನಗರದ ಮುಖಂಡ ಮಲ್ಲೇಶ್‌; ತನಿಖೆ ನಡೆಸುತ್ತಿರುವ ಬಿ.ಎ.ಪಾಟೀಲ ಆಯೋಗಕ್ಕೆ ಸೋಮವಾರ ನಗರದಲ್ಲಿ ದೂರು ಸಲ್ಲಿಸಿದರು.

ಅಫಿಡೆವಿಟ್‌ ಮಾಡಿಸಿದ ಮನವಿ ಪತ್ರದೊಂದಿಗೆ ಪೆನ್‌ಡ್ರೈವ್‌ ಒಂದನ್ನು ಆಯೋಗದ ಅಧಿಕಾರಿಗಳಿಗೆ ಮಲ್ಲೇಶ್‌ ನೀಡಿದರು.

ದೂರು ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘24 ಜನರ ಸಾವಿಗೆ ರೋಹಿಣಿ ಸಿಂಧೂರಿಯೇ ಕಾರಣ. ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು. ಆಸ್ತಿ ಮುಟ್ಟುಗೋಲು ಹಾಕಿಕೊಂಡು ಮೃತರ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು ಎಂದು’ ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.