ಮೈಸೂರು:ಸಿದ್ದರಾಮಯ್ಯ ಆಪ್ತ ಸಿ.ಎನ್.ಮಂಜೇಗೌಡ ಅವರು ಕಾಂಗ್ರೆಸ್ ತೊರೆದು ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಸೋಮವಾರ ಜೆಡಿಎಸ್ ಸೇರಿದರು.
ಚಾಮುಂಡೇಶ್ವರಿ ಕ್ಷೇತ್ರದ ಮುಖಂಡ ಮಂಜೇಗೌಡ ಅವರು ಮೇಲ್ಮನೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದ ಬೇಸರದಲ್ಲಿ ಜೆಡಿಎಸ್ ಸೇರಿದ್ದಾರೆ. ಇದೀಗ ಜೆಡಿಎಸ್ನಿಂದ ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.
ಶಾಸಕರಾದ ಸಾ.ರಾ.ಮಹೇಶ್, ಅಶ್ವಿನ್ ಕುಮಾರ್, ಕೆ.ಮಹದೇವ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.