ADVERTISEMENT

ರೈತರಿಗೆ ಬೆಂಬಲ: ಕಾಂಗ್ರೆಸ್‌ ಧರಣಿ

​ಪ್ರಜಾವಾಣಿ ವಾರ್ತೆ
Published 10 ಜನವರಿ 2021, 16:48 IST
Last Updated 10 ಜನವರಿ 2021, 16:48 IST
ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಭಾನುವಾರ ರಾತ್ರಿ ಕಾಂಗ್ರೆಸ್‌ ಮುಖಂಡರು ಕೇಂದ್ರ ಸರ್ಕಾರದ ಕೃಷಿ ನೀತಿ ಖಂಡಿಸಿ ಧರಣಿ ನಡೆಸಿದರು
ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಭಾನುವಾರ ರಾತ್ರಿ ಕಾಂಗ್ರೆಸ್‌ ಮುಖಂಡರು ಕೇಂದ್ರ ಸರ್ಕಾರದ ಕೃಷಿ ನೀತಿ ಖಂಡಿಸಿ ಧರಣಿ ನಡೆಸಿದರು   

ಮೈಸೂರು: ನವದೆಹಲಿಯ ಹೊರ ವಲಯದಲ್ಲಿ ರೈತ ಸಮುದಾಯ ನಡೆಸಿರುವ ಹೋರಾಟಕ್ಕೆ ಬೆಂಬಲ ಘೋಷಿಸಿದ ಮೈಸೂರು ನಗರ/ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಘಟಕ, ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಭಾನುವಾರ ರಾತ್ರಿ ಧರಣಿ ನಡೆಸಿತು.

‘ಉಳುವ ಯೋಗಿಯ ನೋಡಲ್ಲಿ’ ಎಂಬ ರೈತ ಗೀತೆ ಹಾಡುವ ಮೂಲಕ ಧರಣಿಗೆ ಕಾಂಗ್ರೆಸ್‌ ಮುಖಂಡರು ಚಾಲನೆ ನೀಡಿದರು. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಂಜೆ 7ಕ್ಕೆ ಆರಂಭವಾದ ಧರಣಿ ರಾತ್ರಿ 9ರವರೆಗೂ ನಡೆಯಿತು.

ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿ, ‘ಬಿಜೆಪಿ ಹಳ್ಳಿಗರು, ಕೃಷಿ ಪರವಾದ ಪಕ್ಷ ಎಂಬ ಉಲ್ಲೇಖ ಎಲ್ಲೂ ಇಲ್ಲ. ಇದೊಂದು ವ್ಯಾಪಾರಸ್ಥರ ಪಕ್ಷವಾಗಿದೆ. ರೈತರ ಉತ್ಪಾದನೆಯನ್ನು ದ್ವಿಗುಣಗೊಳಿಸುತ್ತೀನಿ ಎಂದು ಪ್ರಧಾನಿ ನರೇಂದ್ರ ಮೋದಿ ಎಲ್ಲೂ ಹೇಳಿಲ್ಲ. ಯಾವ ರೈತರು ಅದರ ಫಲ ಪಡೆದಿಲ್ಲ. ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ಮಧ್ಯಪ್ರದೇಶ ಇತರ ರಾಜ್ಯಗಳಲ್ಲೂ ರೈತರು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದಾರೆ’ ಎಂದು ಹೇಳಿದರು.

ADVERTISEMENT

ಮಾಜಿ ಶಾಸಕ ವಾಸು ಸೇರಿದಂತೆ ಮತ್ತಿತರ ಮುಖಂಡರು ಮಾತನಾಡಿದರು. ಮಾಜಿ ಸಂಸದ ಆರ್.ಧ್ರುವನಾರಾಯಣ, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ಕಳಲೆ ಎನ್.ಕೇಶವಮೂರ್ತಿ, ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.