ADVERTISEMENT

ಪಕ್ಷ ಸೂಚಿಸಿದರೆ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ: ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2022, 7:23 IST
Last Updated 11 ಡಿಸೆಂಬರ್ 2022, 7:23 IST
ಸಿದ್ದರಾಮಯ್ಯ ಹಾಗೂ ಬಿ.ವೈ.ವಿಜಯೇಂದ್ರ
ಸಿದ್ದರಾಮಯ್ಯ ಹಾಗೂ ಬಿ.ವೈ.ವಿಜಯೇಂದ್ರ   

ಮೈಸೂರು: 'ಕಾಂಗ್ರೆಸ್‌ನ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ, ಅವರ ವಿರುದ್ಧ ಕಣಕ್ಕಿಳಿಯುವಂತೆ ಪಕ್ಷಸೂಚಿಸಿದರೆ ನಾನು ಸಿದ್ಧವಿದ್ದೇನೆ' ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಇಲ್ಲಿ ಭಾನುವಾರ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, 'ಪಕ್ಷ ನನಗೆ ಯಾವುದೇ ಸವಾಲು ಕೊಟ್ಟರೂ ಅದನ್ನು ನಿಭಾಯಿಸುತ್ತೇನೆ.‌ ಪಕ್ಷದ ತೀರ್ಮಾನವೇ ಅಂತಿಮ' ಎಂದು ಪರೋಕ್ಷವಾಗಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧೆಸುವ ಆಸೆಯನ್ನು ವ್ಯಕ್ತಪಡಿಸಿದರು.

'ನಾನು ವರುಣಾ ಮಾತ್ರವಲ್ಲ ಎಲ್ಲಾ ಕ್ಷೇತ್ರಗಳಲ್ಲೂ ಸಂಘಟನೆ ಮಾಡುತ್ತಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಪಕ್ಷವು ಹೆಚ್ಚು ಸ್ಥಾನ ಪಡೆಯಲು ಹೋರಾಟ ಮಾಡುತ್ತಿದ್ದೇವೆ. ಸಂಘಟನೆ ಬಲಪಡಿಸುತ್ತಿದ್ದೇವೆ' ಎಂದರು.

ADVERTISEMENT

'ನರೇಂದ್ರ ಮೋದಿ ಎಂಬುದು ಕೇವಲ ಅಲೆ ಅಲ್ಲ, ಅದೊಂದು ಸುನಾಮಿ. ಕಾಂಗ್ರೆಸ್‌ನವರಿಗೆ ಇದು ಇನ್ನೂ ಅರ್ಥವಾಗಿಲ್ಲ. ಏಕೆಂದರೆ ಆ ಪಕ್ಷದವರು ಭ್ರಮೆಯಲ್ಲಿದ್ದಾರೆ. ಆದ್ದರಿಂದಲೇ, ಗುಜರಾತ್ ಫಲಿತಾಂಶದ ಪರಿಣಾಮವು ಕರ್ನಾಟಕದ ಚುನಾವಣೆ ಮೇಲೆ ಆಗುವುದಿಲ್ಲ ಎಂದು ಹೇಳುತ್ತಿದೆ. ಮುಂಬರುವ ಚುನಾವಣೆ ನಂತರ ಕಾಂಗ್ರೆಸ್‌ಗೆ ಉತ್ತರ‌ ಸಿಗಲಿದೆ' ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.