ಮೈಸೂರು: ಕೊರೊನಾ ಸೋಂಕಿತ ಕೈದಿಯೊಬ್ಬ ಕೋವಿಡ್ ಆಸ್ಪತ್ರೆಯಿಂದ ಭಾನುವಾರ ಪರಾರಿಯಾಗಿದ್ದಾನೆ.
‘ವಿಚಾರಣಾಧೀನ ಕೈದಿಯಾಗಿದ್ದ 21 ವರ್ಷದ ಈತನನ್ನು ಶನಿವಾರ ರಾತ್ರಿಯಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಈತ ಭಾನುವಾರ ಕಾಣೆಯಾಗಿದ್ದಾನೆ’ ಎಂದು ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ.ನಯಾಜ್ ಪಾಷಾ ದೂರು ನೀಡಿದ್ದಾರೆ. ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.