ಮೈಸೂರು: ಕೊರೊನಾ ಸೋಂಕು ತಡೆಯಲು ಸುಪ್ರೀಂಕೋರ್ಟ್ ನೀಡಿದ ಆದೇಶದನ್ವಯ ಇಲ್ಲಿನ ಕೇಂದ್ರ ಕಾರಾಗೃಹದಿಂದ 46 ಮಂದಿ ಕೈದಿಗಳನ್ನು ಮಂಗಳವಾರ ಬಿಡುಗಡೆ ಮಾಡಲಾಯಿತು.
ಇವರಲ್ಲಿ 30 ಮಂದಿ ವಿಚಾರಣಾಧೀನ ಕೈದಿಗಳಿದ್ದರೆ, ಇನ್ನುಳಿದ 16 ಮಂದಿ ಜೀವನಾಂಶ ಪಾವತಿಸಲು ಸಾಧ್ಯವಾಗದ ಕೈದಿಗಳಿದ್ದಾರೆ ಎಂದು ಕಾರಾಗೃಹದ ಮುಖ್ಯ ಅಧೀಕ್ಷಕಿ ಕೆ.ಸಿ.ದಿವ್ಯಶ್ರೀ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.