ADVERTISEMENT

ಹೆಚ್ಚುವರಿ ನ್ಯಾಯಾಲಯ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2020, 16:30 IST
Last Updated 1 ಜೂನ್ 2020, 16:30 IST
ಮೈಸೂರಿನ ಜಯನಗರದ ಮಳಲವಾಡಿಯಲ್ಲಿರುವ ನೂತನ ನ್ಯಾಯಾಲಯದ ಆವರಣದಲ್ಲಿ ಸೋಮವಾರ ಹೆಚ್ಚುವರಿಯಾಗಿ ಹಿರಿಯ ಶ್ರೇಣಿಯ 5, 6, 7ನೇ ಎಸಿಜೆ ನ್ಯಾಯಾಲಯಗಳಿಗೆ ಪ್ರಧಾನ ಜಿಲ್ಲಾ ನ್ಯಾಯಾಧೀಶ ರಾಮಚಂದ್ರ ಡಿ.ಉದ್ದಾರ ಚಾಲನೆ ನೀಡಿದರು
ಮೈಸೂರಿನ ಜಯನಗರದ ಮಳಲವಾಡಿಯಲ್ಲಿರುವ ನೂತನ ನ್ಯಾಯಾಲಯದ ಆವರಣದಲ್ಲಿ ಸೋಮವಾರ ಹೆಚ್ಚುವರಿಯಾಗಿ ಹಿರಿಯ ಶ್ರೇಣಿಯ 5, 6, 7ನೇ ಎಸಿಜೆ ನ್ಯಾಯಾಲಯಗಳಿಗೆ ಪ್ರಧಾನ ಜಿಲ್ಲಾ ನ್ಯಾಯಾಧೀಶ ರಾಮಚಂದ್ರ ಡಿ.ಉದ್ದಾರ ಚಾಲನೆ ನೀಡಿದರು   

ಮೈಸೂರು: ಇಲ್ಲಿನ ಜಯನಗರದ ಮಳಲವಾಡಿಯಲ್ಲಿರುವ ನೂತನ ನ್ಯಾಯಾಲಯದ ಆವರಣದಲ್ಲಿ ಸೋಮವಾರ ಹೊಸದಾಗಿ ಮೂರು ನ್ಯಾಯಾಲಯದ ವಿಭಾಗಗಳನ್ನು ಉದ್ಘಾಟಿಸಲಾಯಿತು.

ನ್ಯಾಯಾಲಯದಲ್ಲಿ ಹೆಚ್ಚುವರಿಯಾಗಿ ಹಿರಿಯ ಶ್ರೇಣಿಯ 5, 6, 7ನೇ ಎಸಿಜೆ ನ್ಯಾಯಾಲಯಗಳಿಗೆ ಪ್ರಧಾನ ಜಿಲ್ಲಾ ನ್ಯಾಯಾಧೀಶ ರಾಮಚಂದ್ರ ಡಿ.ಉದ್ದಾರ ಚಾಲನೆ ನೀಡಿದರು.

ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಸ್.ಆನಂದ್ ಕುಮಾರ್, ವಕೀಲರ ಸಂಘದ ಕಾರ್ಯದರ್ಶಿ ಬಿ.ಶಿವಣ್ಣ, ಉಪಾಧ್ಯಕ್ಷ ಎಸ್.ಜಿ.ಶಿವಣ್ಣೇಗೌಡ ಮತ್ತಿತರ ಪದಾಧಿಕಾರಿಗಳು, ನ್ಯಾಯಾಧೀಶರು ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.