ಮೈಸೂರು: ಜಿಲ್ಲೆಯಲ್ಲಿ 2ನೇ ವ್ಯಕ್ತಿ ‘ಕೋವಿಡ್–19’ ರೋಗದಿಂದ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ನಂಜನಗೂಡಿನ ಔಷಧ ತಯಾರಿಕಾ ಕಾರ್ಖಾನೆಯಲ್ಲಿ ಮೊದಲು ಸೋಂಕು ಹೊಂದಿದ ವ್ಯಕ್ತಿ ಇವರಾಗಿದ್ದಾರೆ.
ಆಸ್ಪತ್ರೆಯಿಂದ ಬಿಡುಗಡೆ ಹೊಂದುವಾಗ ಇವರು ಲಿಖಿತ ಹೇಳಿಕೆ ನೀಡಿದ್ದು, ಎಲ್ಲರೂ ಆರೋಗ್ಯ ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದ್ದಾರೆ. ಜತೆಗೆ, ಆರೋಗ್ಯ ಇಲಾಖೆ ನೀಡಿದ ಚಿಕಿತ್ಸೆಯನ್ನು ಶ್ಲಾಘಿಸಿದ್ದಾರೆ.
ಸದ್ಯ, 40 ಮಂದಿ ‘ಕೋವಿಡ್–19’ ಪೀಡಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.