ಮೈಸೂರು: ನಗರ ಒಳಗೊಂಡಂತೆ ತಾಲ್ಲೂಕಿನಲ್ಲಿ 10ನೇ ತರಗತಿಯ ಭೌತಿಕ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಿ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಬುಧವಾರ ಆದೇಶ ಹೊರಡಿಸಿದ್ದಾರೆ.
ಉಳಿದಂತೆ, ಅಂಗನವಾಡಿಯಿಂದ 9ನೇ ತರಗತಿಯವರೆಗಿನ ಶಾಲೆಗಳ ಭೌತಿಕ ತರಗತಿಗಳನ್ನು ನಗರ ಮತ್ತು ತಾಲ್ಲೂಕಿನಲ್ಲಿ ಸ್ಥಗಿತಗೊಳಿಸಲು ಸೂಚಿಸಿದ್ದಾರೆ.
ಎಸ್ಸೆಎಸ್ಸೆಲ್ಸಿಯ ಭೌತಿಕ ತರಗತಿಗಳ ಸ್ಥಗಿತಕ್ಕೆ ಇವರು ಮಂಗಳವಾರವಷ್ಟೇ ಆದೇಶಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.