ADVERTISEMENT

ಕೋವಿಡ್‌: ಹೆಚ್ಚು ಪ‍ರೀಕ್ಷೆ ನಡೆಸಲು ಸೂಚನೆ

ಕೋವಿಡ್‌ ನಿಯಂತ್ರಣ–ಚಾಮರಾಜ ಕ್ಷೇತ್ರದ ಟಾಸ್ಕ್‌ ಫೋರ್ಸ್‌ ಸಭೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2020, 5:08 IST
Last Updated 13 ಆಗಸ್ಟ್ 2020, 5:08 IST
ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಎಲ್‌.ನಾಗೇಂದ್ರ ನೇತೃತ್ವದಲ್ಲಿ ಬುಧವಾರ ಕೋವಿಡ್‌ ಟಾಸ್ಕ್‌ ಫೋರ್ಸ್‌ ಸಭೆ ನಡೆಯಿತು. ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌ ಇದ್ದಾರೆ
ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಎಲ್‌.ನಾಗೇಂದ್ರ ನೇತೃತ್ವದಲ್ಲಿ ಬುಧವಾರ ಕೋವಿಡ್‌ ಟಾಸ್ಕ್‌ ಫೋರ್ಸ್‌ ಸಭೆ ನಡೆಯಿತು. ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌ ಇದ್ದಾರೆ   

ಮೈಸೂರು: ‘ಒಂದೊಂದು ಕ್ಷೇತ್ರಕ್ಕೆ ಒಂದು ರೀತಿ ಮಾಡುತ್ತಿದ್ದೀರಿ. ನಾನು ಒಂದು ವಲಯಕ್ಕೆ ಒಂದು ಆಂಬುಲೆನ್ಸ್‌ ನೀಡಿ ಎಂದು ಹೇಳಿದ್ದೆ. ಆದರೆ, ನೀವು ಅದನ್ನು ಮಾಡಿದ್ದೀರಾ’ ಎಂದು ಶಾಸಕ ಎಲ್‌.ನಾಗೇಂದ್ರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಜಿಲ್ಲಾ ಪಂಚಾಯಿತಿಯಲ್ಲಿ ಬುಧವಾರ ನಡೆದ ಚಾಮರಾಜ ವಿಧಾನಸಭಾ ಕ್ಷೇತ್ರದ ಕೋವಿಡ್-19 ಟಾಸ್ಕ್‌ ಫೋರ್ಸ್‌ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‌ಕೋವಿಡ್‌ ನಿಯಂತ್ರಣಕ್ಕಾಗಿ ವಾರ್ಡ್‌ವಾರು ಕೈಗೊಂಡಿರುವ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ಪಡೆದರು. ಆಂಟಿಜೆನ್ ಪರೀಕ್ಷಾ ಕೇಂದ್ರಗಳನ್ನು ವಲಯವಾರು ಪ್ರತಿ ನಿತ್ಯ ನಡೆಸಲು
ಮೂರು ಸ್ಥಳಗಳನ್ನು ಗುರುತಿಸಲಾಯಿತು. ಒಂದು ಮೊಬೈಲ್‌ ಪರೀಕ್ಷಾ ಕೇಂದ್ರವನ್ನು ಪ್ರಾರಂಭಿಸಲು ತೀರ್ಮಾನಿಸ
ಲಾಯಿತು.

ADVERTISEMENT

‘ಹೋಂ ಐಸೊಲೇಷನ್‌ನಲ್ಲಿರುವ ಸೋಂಕಿತರಿಗೆ ಪರೀಕ್ಷಾ ಫಲಿತಾಂಶ ಬಂದ 3 ಗಂಟೆಗಳ ಒಳಗಾಗಿ ಅಗತ್ಯ ಔಷದಿ, ಸಲಹೆ, ಸೂಚನೆ ನೀಡಬೇಕು. ಅದಕ್ಕಾಗಿ ಅವರ ಮನೆಗೆ ವೈದ್ಯರು ತೆರಳಬೇಕು. ರಾಜ್ಯ ಸರ್ಕಾರದಿಂದ ಈಗಾಗಲೇ ಸಾಕಷ್ಟು ಔಷಧ ಬಂದಿದೆ’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಸಿಐಟಿಬಿ ಚೌಲ್ಟ್ರಿಯಲ್ಲಿ ಮೂರು ದಿನಗಳಿಂದ ಕೋವಿಡ್‌ ಪರೀಕ್ಷೆ ಮಾಡಲಾಗಿದೆ. ವಿಕ್ರಾಂತ್‌ ಕಾರ್ಖಾನೆ ನೌಕರರು ಬಂದು ಇಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಆದ್ದರಿಂದ ಹೆಚ್ಚಿಗೆ ಪಾಸಿಟಿವ್ ಪ್ರಕರಣಗಳು ಬಂದಿವೆ. ಬೇರೆ ಕಡೆ ಸಹ ಪರೀಕ್ಷೆ ಮಾಡಲು ವ್ಯವಸ್ಥೆ ಮಾಡಬೇಕು. ಮುಂದಿನ ದಿನಗಳಲ್ಲಿ ನಿತ್ಯ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಿ, ಸೋಂಕಿತರನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಬೇಕು’ ಎಂದು ಹೇಳಿದರು.

ಶೀಘ್ರದಲ್ಲಿಯೇ ಕೆಆರ್‌ಎಸ್‌ ರಸ್ತೆಯಲ್ಲಿರುವ ಟ್ರಾಮಾ ಸೆಂಟರ್‌ನಲ್ಲಿ ಲಭ್ಯವಿರುವ ಸುಮಾರು 280 ಬೆಡ್‌ಗಳನ್ನು ಮುಂದಿನ ನಾಲ್ಕೈದು ದಿನಗಳಲ್ಲಿ ಸಜ್ಜುಗೊಳಿಸಲಾಗುವುದು. ಸುಮಾರು 40 ವೆಂಟಿಲೇಟರ್‌ ಹಾಗೂ ಆಕ್ಷಿಜನ್‌ ಸೌಲಭ್ಯವಿದೆ. ಕೆ.ಆರ್‌.ಆಸ್ಪತ್ರೆಯಲ್ಲಿರುವ ಕೊರೊನಾ ಸೋಂಕಿತರನ್ನು ಅಲ್ಲಿಗೆ ಸ್ಥಳಾಂತರ ಮಾಡಲಾಗುವುದು ಎಂದು ಹೇಳಿದರು.

ಬಯಲು ರಂಗಮಂದಿರ ಸಹ ಖಾಲಿ ಇದೆ‌. ಅದನ್ನು ಸಹ ಇದಕ್ಕೆ ಉಪಯೋಗಿಸಬಹುದು. ಯಾರಿಗೂ ತೊಂದರೆ ಆಗದಂತೆ ಹೊರಗಡೆ ಪರೀಕ್ಷೆ ಮಾಡಬಹುದು ಎಂಬ ಸಲಹೆಯೂ ಕೇಳಿಬಂತು.

ಸಭೆಯಲ್ಲಿ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಪಾಲಿಕೆ ಸದಸ್ಯರಾದ ಎಂ.ಎಸ್.ಸುಬ್ಬಯ್ಯ, ರವೀಂದ್ರ, ರಂಗಸ್ವಾಮಿ, ವೇದಾವತಿ ಹಾಗೂ ಟಾಸ್ಕ್ ಫೋರ್ಸ್‌ ಸಮಿತಿ ಸದಸ್ಯ ಕಾರ್ಯದರ್ಶಿ ಬಿಳಿಗಿರಿ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.