ADVERTISEMENT

ಬೆಟ್ಟದಪುರ: ಹುಂಡಿ ಒಡೆದು ಹಣ ದೋಚಿದ ಕಳ್ಳರು

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2023, 14:00 IST
Last Updated 9 ಆಗಸ್ಟ್ 2023, 14:00 IST
ಬೆಟ್ಟದಪುರ ಗ್ರಾಮದೇವತೆ ಶಾಂತವೀರಮ್ಮ ದೇವಸ್ಥಾನದಲ್ಲಿ ಹುಂಡಿ ಒಡೆದು ಕಳ್ಳತನವಾಗಿರುವ ಹಿನ್ನಲೆ ಪೊಲೀಸರು ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಕರೆಸಿ ಪರಿಶೀಲನೆ ನಡೆಸಿದರು
ಬೆಟ್ಟದಪುರ ಗ್ರಾಮದೇವತೆ ಶಾಂತವೀರಮ್ಮ ದೇವಸ್ಥಾನದಲ್ಲಿ ಹುಂಡಿ ಒಡೆದು ಕಳ್ಳತನವಾಗಿರುವ ಹಿನ್ನಲೆ ಪೊಲೀಸರು ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಕರೆಸಿ ಪರಿಶೀಲನೆ ನಡೆಸಿದರು   

ಬೆಟ್ಟದಪುರ: ಇಲ್ಲಿನ ಗ್ರಾಮದೇವತೆಯಾದ ಶಾಂತವೀರಮ್ಮ ದೇವಾಲಯದಲ್ಲಿ ಹುಂಡಿ ಒಡೆದು ಹಣ ದೋಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

‘ಮಂಗಳವಾರ ಮಧ್ಯರಾತ್ರಿ ವೇಳೆ ಇಬ್ಬರು ಕಳ್ಳರು ದೇವಸ್ಥಾನಕ್ಕೆ ಬಂದಿರುವುದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳ್ಳರು ಯಾರೆಂದು ಪತ್ತೆಯಾಗಿಲ್ಲ’ ಎಂದು ಪೊಲೀಸ್‌ ಮೂಲಗಳಿ ತಿಳಿಸಿವೆ.

ಬೆಟ್ಟದಪುರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್‌ ಎಂ.ಪ್ರಕಾಶ್ ಎತ್ತಿನಮನಿ ನೇತೃತ್ವದ ತಂಡ ಸ್ಥಳ ಪರಿಶೀಲನೆ ನಡೆಸಿದೆ.

ADVERTISEMENT

‘ದೇವಾಲಯದ ಹುಂಡಿಯಲ್ಲಿ ಸುಮಾರು ₹30 ಸಾವಿರ ಹಣ ಇರಬಹುದು ಎಂದು ಅಂದಾಜಿಸಲಾಗಿದೆ’ ಎಂದು ಆಡಳಿತ ಮಂಡಳಿ ಸದಸ್ಯರು ತಿಳಿಸಿದ್ದಾರೆ.

ವರ್ಷದ ಹಿಂದೆ ಬೆಟ್ಟದಪುರ ಗ್ರಾಮದ ದಾನಿಗಳು ಭಕ್ತರು ಸೇರಿ ಸುಮಾರು ₹ 90 ಲಕ್ಷ ರೂ.ವೆಚ್ಚದಲ್ಲಿ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲಾಗಿತ್ತು.

ದೇವಸ್ಥಾನದಲ್ಲಿ ನಡೆದಿರುವ ಈ ಕಳ್ಳತನ ಪ್ರಕರಣದಿಂದ ನಿವಾಸಿಗಳಲ್ಲಿ ಆತಂಕ ಮೂಡಿದೆ. ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.